ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಯುವಕ ಮೂಗು ತುಂಡರಿಸಿಕೊಂಡ ವ್ಯಕ್ತಿ.
ಸ್ನೇಹಿತ ರಾಕೇಶ್ ಕೃತ್ಯ ಎಸಗಿದಾತ. ಮೂಲತಃ ಮೂಡಿಗೆರೆ ತಾಲೂಕಿ ನವನಾಗಿರುವ ರಾಕೇಶ್ ಪ್ರಸ್ತುತ ಪಿಲ್ಯದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31ರ ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಯುವಕರ ತಂಡ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.
ಗಂಭೀರ ಗಾಯಗೊಂಡ ದೀಕ್ಷಿತ್ನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಗೆ ದಾಖಲಿಸಲಾ ಗಿದೆ. ವೇಣೂರು ಪೊಲೀಸರು ಗಾಯಾಳುವಿನ ಹೇಳಿಕೆ ಪಡಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…