ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಯುವಕ ಮೂಗು ತುಂಡರಿಸಿಕೊಂಡ ವ್ಯಕ್ತಿ.
ಸ್ನೇಹಿತ ರಾಕೇಶ್ ಕೃತ್ಯ ಎಸಗಿದಾತ. ಮೂಲತಃ ಮೂಡಿಗೆರೆ ತಾಲೂಕಿ ನವನಾಗಿರುವ ರಾಕೇಶ್ ಪ್ರಸ್ತುತ ಪಿಲ್ಯದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31ರ ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಯುವಕರ ತಂಡ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.
ಗಂಭೀರ ಗಾಯಗೊಂಡ ದೀಕ್ಷಿತ್ನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಗೆ ದಾಖಲಿಸಲಾ ಗಿದೆ. ವೇಣೂರು ಪೊಲೀಸರು ಗಾಯಾಳುವಿನ ಹೇಳಿಕೆ ಪಡಕೊಂಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…