ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆಯಾಗಿ ಓರ್ವ ತನ್ನ ಗೆಳೆಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಯುವಕ ಮೂಗು ತುಂಡರಿಸಿಕೊಂಡ ವ್ಯಕ್ತಿ.
ಸ್ನೇಹಿತ ರಾಕೇಶ್ ಕೃತ್ಯ ಎಸಗಿದಾತ. ಮೂಲತಃ ಮೂಡಿಗೆರೆ ತಾಲೂಕಿ ನವನಾಗಿರುವ ರಾಕೇಶ್ ಪ್ರಸ್ತುತ ಪಿಲ್ಯದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸ್ಥಳೀಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31ರ ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಯುವಕರ ತಂಡ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ ಮಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.
ಗಂಭೀರ ಗಾಯಗೊಂಡ ದೀಕ್ಷಿತ್ನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಗೆ ದಾಖಲಿಸಲಾ ಗಿದೆ. ವೇಣೂರು ಪೊಲೀಸರು ಗಾಯಾಳುವಿನ ಹೇಳಿಕೆ ಪಡಕೊಂಡಿದ್ದಾರೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…