ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ – vishwanews24
ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.
ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನಡೆದ ಕ್ಷುಲಕ ಕಾರಣಕ್ಕೆ 14 ವರ್ಷದ ಮಗ ನೇಣಿಗೆಶರಣಾಗಿದ್ದ, ಜ.4 ರಂದು ಈ ಘಟನೆನಡೆದಿದ್ದು ಸರಿಯಾಗಿ 13 ನೇ ದಿನದ ಮಗನ ಉತ್ತರ ಕ್ರೀಯೆಯಂದೇ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮದುವೆಯಾಗಲು ಹೆಣ್ಣು ಸಿಗದ ಕಾರಣ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ – vishwanews24
ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ 14 ವರ್ಷದ ಯಕ್ಷಿತ್ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅದ್ಯಾವುದೋ ಕಾರಣಕ್ಕೆ ಆರು ವರ್ಷದ ತಮ್ಮ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ, ಈ ವಿಚಾರದಲ್ಲಿ ನೊಂದು ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ತಮ್ಮನ ಎದುರೆ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯ ಕೋಣೆಯಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಇದೀಗ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದಿದ್ದು ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
