ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.
ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನಡೆದ ಕ್ಷುಲಕ ಕಾರಣಕ್ಕೆ 14 ವರ್ಷದ ಮಗ ನೇಣಿಗೆಶರಣಾಗಿದ್ದ, ಜ.4 ರಂದು ಈ ಘಟನೆನಡೆದಿದ್ದು ಸರಿಯಾಗಿ 13 ನೇ ದಿನದ ಮಗನ ಉತ್ತರ ಕ್ರೀಯೆಯಂದೇ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ 14 ವರ್ಷದ ಯಕ್ಷಿತ್ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅದ್ಯಾವುದೋ ಕಾರಣಕ್ಕೆ ಆರು ವರ್ಷದ ತಮ್ಮ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ, ಈ ವಿಚಾರದಲ್ಲಿ ನೊಂದು ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ತಮ್ಮನ ಎದುರೆ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯ ಕೋಣೆಯಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಇದೀಗ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದಿದ್ದು ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…