ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.
ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನಡೆದ ಕ್ಷುಲಕ ಕಾರಣಕ್ಕೆ 14 ವರ್ಷದ ಮಗ ನೇಣಿಗೆಶರಣಾಗಿದ್ದ, ಜ.4 ರಂದು ಈ ಘಟನೆನಡೆದಿದ್ದು ಸರಿಯಾಗಿ 13 ನೇ ದಿನದ ಮಗನ ಉತ್ತರ ಕ್ರೀಯೆಯಂದೇ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ 14 ವರ್ಷದ ಯಕ್ಷಿತ್ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅದ್ಯಾವುದೋ ಕಾರಣಕ್ಕೆ ಆರು ವರ್ಷದ ತಮ್ಮ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ, ಈ ವಿಚಾರದಲ್ಲಿ ನೊಂದು ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ತಮ್ಮನ ಎದುರೆ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯ ಕೋಣೆಯಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಇದೀಗ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದಿದ್ದು ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…