ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.
ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನಡೆದ ಕ್ಷುಲಕ ಕಾರಣಕ್ಕೆ 14 ವರ್ಷದ ಮಗ ನೇಣಿಗೆಶರಣಾಗಿದ್ದ, ಜ.4 ರಂದು ಈ ಘಟನೆನಡೆದಿದ್ದು ಸರಿಯಾಗಿ 13 ನೇ ದಿನದ ಮಗನ ಉತ್ತರ ಕ್ರೀಯೆಯಂದೇ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ 14 ವರ್ಷದ ಯಕ್ಷಿತ್ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅದ್ಯಾವುದೋ ಕಾರಣಕ್ಕೆ ಆರು ವರ್ಷದ ತಮ್ಮ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ, ಈ ವಿಚಾರದಲ್ಲಿ ನೊಂದು ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ತಮ್ಮನ ಎದುರೆ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯ ಕೋಣೆಯಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಇದೀಗ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದಿದ್ದು ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…