Featured

ಬೆಳ್ತಂಗಡಿ : 16ನೇ ಶತಮಾನದ ಅಪೂರ್ವ ಪ್ರಾಚೀನ ತುಳು ಶಾಸನ ಪತ್ತೆ -Vishwanews24

ಬೆಳ್ತಂಗಡಿ : ತಾಲೂಕಿನ ಇಳಂತಿಲ ಗ್ರಾಮದ ಇಚ್ಚಾರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಚೀನ ತುಳು ಶಾಸನವೊಂದು ಬೆಳಕಿಗೆ ಬಂದಿದೆ.

ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದ ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.

ಭೂತದ ಕಲ್ಲು ಎಂದು ಭಾವಿಸಲಾಗಿದ್ದ ಈ ಕಲ್ಲಿನ ಕುರಿತು ಜೋತಿಷಿಗಳು ಅನುಮಾನಗೊಂಡು ವಿಶ್ಲೇಷಿಸಿದಾಗ ದೇವಸ್ಥಾನದ ಆಡಳಿತ ಮೊಕ್ತೇಸರರ ಸೂಚನೆಯಂತೆ ಹಿರಿಯ ಶಾಸನ ತಜ್ಞ ಡಾ| ವೈ. ಉಮಾನಾಥ ಶೆಣೈ ಮತ್ತು ಡಾ| ಎಸ್‌.ಆರ್‌. ವಿಘ್ನರಾಜರನ್ನು ಕರೆಸಿ ಓದಿಸಿದಾಗ ಇದು ಒಟ್ಟು 8 ಪಂಕ್ತಿಗಳಲ್ಲಿ ಬರೆದಿರುವ ಕ್ರಿ.ಶ. ಸುಮಾರು 16ನೇ ಶತಮಾನದ ಒಂದು ಅಪೂರ್ವ ತುಳುಶಾಸನವೆಂದು ತಿಳಿದು ಬಂದಿದೆ.

ಉಳಿದಂತೆ ಮಾಚಾರ ಸಮಾಜದ ವಾಸಪ್ಪ ಎಂಬವನು ಶಾಸನವನ್ನು ರಚಿಸಿ ಈ ಶಿಲೆಯ ಮೇಲೆ ಬರೆದ. ನಾಗಗಳಿಗೆ ಮತ್ತು ಜಲಕ್ಕೆ ದೇವತೆಯಾಗಿರುವ ಸುಬ್ರಹ್ಮಣ್ಯನನ್ನು ಇಲ್ಲಿ ಉದಕಮಣಿ ಎಂದು ವಿಶೇಷವಾಗಿ ಕರೆಯಲಾಗುತ್ತಿತ್ತು. ಇಂದಿಗೂ ಇಲ್ಲಿ ಶ್ರೀ ಬಾಲಸುಬ್ರಹ್ಮಣ್ಯನನ್ನು ನೀರಿಗಾಗಿ ಪ್ರಾರ್ಥಿಸಿ ಧಾರಾಳ ನೀರನ್ನು ಪಡೆಯಲಾಗುತ್ತದೆ. ಆದುದರಿಂದ ಪ್ರಾಚೀನ ಕಾಲ ದಿಂದಲೂ ಉದಕ ಮಣಿಯೆಂದು ಶ್ರೀ ದೇವರನ್ನು ಸಂಬೋಧಿಸಲಾಗುತ್ತಿತ್ತು.
ಈ ಶಾಸನವನ್ನು ಓದುವುದರಲ್ಲಿ ಧರ್ಮಸ್ಥಳದ ಪವನಕುಮಾರ್‌ ಸಹಕರಿಸಿದ್ದರು.

ದೇವಾಲಯದ ಆಡಳಿತ ಮೊಕ್ತೇಸರ ಹಾಗೂ ಅರ್ಚಕರಾದ ಸತೀಶ ಪುತ್ತೂರಾಯ, ಸಹೋದರ ಸೂರ್ಯ ನಾರಾಯಣ ಪುತ್ತೂರಾಯರು ವ್ಯವಸ್ಥೆಗೊಳಿ ಸಿದ್ದರು. ಚರಸ್ಥಿತಿಯಲ್ಲಿದ್ದ ಈ ಶಿಲಾ ಶಾಸನವನ್ನು ಈಗ ಸುರಕ್ಷಿತವಾಗಿ ಇಡಲಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

14 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

14 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

14 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

15 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

15 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 hours ago