ಬೆಳ್ತಂಗಡಿ : ತಾಲೂಕಿನ ಇಳಂತಿಲ ಗ್ರಾಮದ ಇಚ್ಚಾರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಚೀನ ತುಳು ಶಾಸನವೊಂದು ಬೆಳಕಿಗೆ ಬಂದಿದೆ.
ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದ ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.
ಭೂತದ ಕಲ್ಲು ಎಂದು ಭಾವಿಸಲಾಗಿದ್ದ ಈ ಕಲ್ಲಿನ ಕುರಿತು ಜೋತಿಷಿಗಳು ಅನುಮಾನಗೊಂಡು ವಿಶ್ಲೇಷಿಸಿದಾಗ ದೇವಸ್ಥಾನದ ಆಡಳಿತ ಮೊಕ್ತೇಸರರ ಸೂಚನೆಯಂತೆ ಹಿರಿಯ ಶಾಸನ ತಜ್ಞ ಡಾ| ವೈ. ಉಮಾನಾಥ ಶೆಣೈ ಮತ್ತು ಡಾ| ಎಸ್.ಆರ್. ವಿಘ್ನರಾಜರನ್ನು ಕರೆಸಿ ಓದಿಸಿದಾಗ ಇದು ಒಟ್ಟು 8 ಪಂಕ್ತಿಗಳಲ್ಲಿ ಬರೆದಿರುವ ಕ್ರಿ.ಶ. ಸುಮಾರು 16ನೇ ಶತಮಾನದ ಒಂದು ಅಪೂರ್ವ ತುಳುಶಾಸನವೆಂದು ತಿಳಿದು ಬಂದಿದೆ.
ಉಳಿದಂತೆ ಮಾಚಾರ ಸಮಾಜದ ವಾಸಪ್ಪ ಎಂಬವನು ಶಾಸನವನ್ನು ರಚಿಸಿ ಈ ಶಿಲೆಯ ಮೇಲೆ ಬರೆದ. ನಾಗಗಳಿಗೆ ಮತ್ತು ಜಲಕ್ಕೆ ದೇವತೆಯಾಗಿರುವ ಸುಬ್ರಹ್ಮಣ್ಯನನ್ನು ಇಲ್ಲಿ ಉದಕಮಣಿ ಎಂದು ವಿಶೇಷವಾಗಿ ಕರೆಯಲಾಗುತ್ತಿತ್ತು. ಇಂದಿಗೂ ಇಲ್ಲಿ ಶ್ರೀ ಬಾಲಸುಬ್ರಹ್ಮಣ್ಯನನ್ನು ನೀರಿಗಾಗಿ ಪ್ರಾರ್ಥಿಸಿ ಧಾರಾಳ ನೀರನ್ನು ಪಡೆಯಲಾಗುತ್ತದೆ. ಆದುದರಿಂದ ಪ್ರಾಚೀನ ಕಾಲ ದಿಂದಲೂ ಉದಕ ಮಣಿಯೆಂದು ಶ್ರೀ ದೇವರನ್ನು ಸಂಬೋಧಿಸಲಾಗುತ್ತಿತ್ತು.
ಈ ಶಾಸನವನ್ನು ಓದುವುದರಲ್ಲಿ ಧರ್ಮಸ್ಥಳದ ಪವನಕುಮಾರ್ ಸಹಕರಿಸಿದ್ದರು.
ದೇವಾಲಯದ ಆಡಳಿತ ಮೊಕ್ತೇಸರ ಹಾಗೂ ಅರ್ಚಕರಾದ ಸತೀಶ ಪುತ್ತೂರಾಯ, ಸಹೋದರ ಸೂರ್ಯ ನಾರಾಯಣ ಪುತ್ತೂರಾಯರು ವ್ಯವಸ್ಥೆಗೊಳಿ ಸಿದ್ದರು. ಚರಸ್ಥಿತಿಯಲ್ಲಿದ್ದ ಈ ಶಿಲಾ ಶಾಸನವನ್ನು ಈಗ ಸುರಕ್ಷಿತವಾಗಿ ಇಡಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…