ಬೆಳ್ತಂಗಡಿ: KSRTC ಬಸ್ಸಿಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲಿಯೇ ಸಾವು – Vishwanews24
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು..
ಹುಟ್ಟು ಹಬ್ಬದಂದೇ ದುರಂತ ಅಂತ್ಯ ಕಂಡ ಯುವಕ..
ಬೆಳ್ತಂಗಡಿ,: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ.
ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವೇಣೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ : ಕಿಸಾನ್ ಸಮ್ಮಾನ್ ನಿಧಿ ಯೋಜನೆ – ಇ-ಕೆವೈಸಿಗೆ ಜೂನ್ 30 ಕೊನೆಯ ದಿನ – Vishwanews24
