ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಜಿಲ್ಲಾ ಸಮಿತಿ ಸದಸ್ಯ, ಸಾಮಾಜಿಕ ಮುಂದಾಳು, ಸಂಘಟಕ ಹೈದರ್ ನೀರ್ಸಾಲ್(55) ಉಜಿರೆ ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸರಕಾರದ ಸಿಎಸ್ಸಿ ಆನ್ಲೈನ್ ಕೇಂದ್ರವನ್ನೂ ನಡೆಸುತ್ತಿದ್ದ ಅವರು ಸಿಎಸ್ಸಿ ವಿಎಲ್ಇ ಸೊಸೈಟಿ ಬೆಳ್ತಂಗಡಿ ಭಾಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ನಿರಂತರ ಕಾರ್ಯತತ್ಪರರಾಗಿಯೇ ಇರುತ್ತಿದ್ದ ಅವರು ಮಂಗಳವಾರ “ಗ್ರಾಮ ಒನ್” ಇದರ ಸಭೆಗಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.
ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ, ತಾಲೂಕು ಮುಸ್ಲಿಂ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಹೈದರ್ ನಿರ್ಸಾಲ್ ಅವರ ಮಯ್ಯತ್ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು, 3 ಗಂಟೆಗೆ ಅವರ ಮನೆಗೆ ತಲುಪಲಿದೆ. ಅಲ್ಲಿ ಅಂತಿಮ ವಿಧಿ ಪೂರೈಸಿ ಉಜಿರೆ ಹಳೆಪೇಟೆ ಮಸೀದಿಯ ಹೊರಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುವ್ಯವಸ್ಥೆಯ ದೃಷ್ಟಿಯಿಂದ ಎಲ್ಲರೂ ಅಲ್ಲಿಯೇ ಅಂತಿಮ ದರ್ಶನ ಪಡೆಯುವಂತೆ ಕುಟುಂಬದವರು ವಿನಂತಿಸಿದ್ದಾರೆ.
ಮೃತರು ತಾಯಿ, ಪತ್ಮಿ, ಓರ್ವ ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…