Featured

ಬೆಳ್ತಂಗಡಿ :Soujanya ತಾಯಿ ಮುಂದೆ ಅಣ್ಣಪ್ಪ ಬೆಟ್ಟದಲ್ಲಿ ಆಣೆ ಪ್ರಮಾಣ ಮಾಡಿದ ಧೀರಜ್‌, ಮಲ್ಲಿಕ್, ಉದಯ್ ಜೈನ್ – vishwanews24

ಬೆಳ್ತಂಗಡಿ :Soujanya ತಾಯಿ ಮುಂದೆ ಅಣ್ಣಪ್ಪ ಬೆಟ್ಟದಲ್ಲಿ ಆಣೆ ಪ್ರಮಾಣ ಮಾಡಿದ ಧೀರಜ್‌, ಮಲ್ಲಿಕ್, ಉದಯ್ ಜೈನ್

ವಿನಾಕಾರಣ ನಮ್ಮ‌ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ ,ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು:ಧೀರಜ್‌ ಕೆಲ್ಲ

ಬೆಳ್ತಂಗಡಿ: 11 ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪ್ರಕರಣದಲ್ಲಿ ತಮ್ಮ‌ಹೆಸರು ಬರುತ್ತಿರುವ ಹಿನ್ನೆಲೆ ಸೌಜನ್ಯ ಅವರ ತಾಯಿ ಮುಂದೆಯೇ ಇಂದು (ಆ.27) ರಂದು ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಧೀರಜ್‌ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಆಣೆ ಪ್ರಮಾಣ ಮಾಡಿರುವ ಘಟನೆ ನಡೆಯಿತು.

ಸೌಜನ್ಯ ನ್ಯಾಯಕ್ಕಾಗಿ ವಿಶ್ವ ಹಿಂದು ಪರಿಷತ್ ಭಜರಂಗ ದಳದ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಹಮ್ಮಿಕೊಂಡ ನೇತ್ರಾವತಿಯಿಂದ ಅಣ್ಣಪ್ಪ ಸ್ವಾಮಿ‌ ಬೆಟ್ಟದ ವರೆಗಿನ ಪಾದಯಾತ್ರೆ ಬಳಿಕ ಪ್ರಮಾಣ ಕೈಗೊಳ್ಳಲಾಯಿತು.

ಬಳಿಕ ಮಾತನಾಡಿದ ಧೀರಜ್‌ ಕೆಲ್ಲ, ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಮುಂದೆಯೇ ನಾವು ಪ್ರಮಾಣ ಕೈಗೊಂಡಿದ್ದೇವೆ. ನಾವು ನಿರ್ದೋಷಿಗಳೆಂದು ಸಾಬೀತಾಗಿದೆ‌. ನಮಗೂ ಕುಟುಂಬ, ಬಂಧುವರ್ಗವಿದೆ. ಆದರೆ ವಿನಾಕಾರಣ ನಮ್ಮ‌ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು. ನಾವು ಈ ಹಿಂದೆ ಕಾನತ್ತೂರಿಗೂ ತೆರಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಹೇಳಿದರು.

ಆಣೆ ಪ್ರಮಾಣಕ್ಕೂ ಮುನ್ನ ಧರ್ಮಸ್ಥಳದಲ್ಲಿ ಜನಸ್ತೋಮ ಜಮಾಯಿಸಿದ್ದರು. ಪೊಲೀಸರು ಎಲ್ಲರನ್ನು ಶಾಂತಗೊಳಸಿ ಪರಿಸ್ಥಿತಿ ತಿಳಿಗೊಳಿಸಿದರು. ವಿಹಿಂಪ ಸಂಘಟನೆಯ 200 ಕ್ಕೂ ಅಧಿಕ ಮಂದಿ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ದ್ವಾರದವರೆಗೆ ಶಿವ ಪಂಚಾಕ್ಷರಿ ಪಠಣದೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ಬಂದರು‌.

ದ.ಕ. ಎಸ್.ಪಿ. ರಿಷ್ವಂತ್ ಅವರು ಪ್ರತಿಭಟನೆಗಾರರನ್ನು ಧರ್ಮಸ್ಥಳ ದ್ವಾರದ ಬಳಿ ತಡೆದು, ಸೌಜನ್ಯ ಕುಟುಂಬಸ್ಥರು ಹಾಗೂ ವಿಹಿಂಪದ ಪ್ರಮುಖರನ್ನಷ್ಟೆ ದ್ವಾರದ ಒಳ ಪ್ರವೇಶಕ್ಕೆ ಅನುಮತಿ ಮಾಡಿಕೊಟ್ಟರು. ಮಲ್ಲಿಕ್ ಜೈನ್, ಧೀರಜ್ ಕೆಲ್ಲ, ಉದಯ್ ಜೈನ್ ಪ್ರಮಾಣ ಮಾಡುತ್ತಲೆ ಸೌಜನ್ಯ ತಾಯಿ ಕಣ್ಣೀರಿಡುತ್ತಾ ಯಾವುದೇ ಪ್ರತಿಕ್ರಿಯೆ ನೀಡದೆ ಹಿಂದಿರುಗಿದರು.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ವಿಹಿಂಪ ಪ್ರಮುಖರು ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಅಣ್ಣಪ್ಪ ಸ್ವಾಮಿ ಮೆಟ್ಟಿಲಲ್ಲಿ ಪ್ರಾರ್ಥನೆ ಮಾಡಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

15 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

16 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

17 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

17 hours ago