ಬೆಳ್ಮಣ್ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಜ. 25 ರ ಬುಧವಾರ ತಡರಾತ್ರಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ 46 ವರ್ಷ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೃಷ್ಣ ಕುಲಾಲ್ ಎಂಬಾತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ.
ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ.
ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…