ಬೆಳ್ಮಣ್: ಜಾತಿ ಧರ್ಮ ಹೆಸರಲ್ಲಿ ಸಮಾಜದಲ್ಲಿ ಸಾಮರಸ್ಯ ಪ್ರತೀಕವಾಗಿ ಇಲ್ಲೊಂದು ವಿಶೇಷ ನಡೆದಿದೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗೋಕುಲನಗರದ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಯಾತ್ರೆಗೆ ಮುಂದಾಗಿದ್ದಾನೆ.
ಇದು ಇವರ 18ನೇ ವರ್ಷದ ಯಾತ್ರೆ
ದಿ| ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ ನದ್ದು ಎಲೆಕ್ಟ್ರಿಕಲ್ ವೃತ್ತಿ. 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವ ರಿಂದ ಪ್ರಭಾವಿತರಾಗಿ ಮಾಲೆ ಧರಿಸಿ ದರು. ಕೊರೊನಾ ಸಂದರ್ಭ ದಲ್ಲೂ ಅಯ್ಯಪ್ಪನ ದರ್ಶನ ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ಸಾಗಿ ಅಯ್ಯಪ್ಪನ ದರ್ಶನ ಮಾಡಿದರು. ತಂದೆ ತೀರಿಕೊಂಡ ವರ್ಷ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ಎನ್ನುತ್ತಾರೆ ಅಜಿತ್ ಸೆರಾವೋ. ಮಕರ ಜ್ಯೋತಿಯಂದು ಅಜಿತ್ ಅಯ್ಯಪ್ಪನನ್ನು ಕಣ್ತುಂಬಿಕೊಳ್ಳುವರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…