ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.
ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದ್ದು, ಮತ್ತೆ ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇನ್ನು ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದು, ಈ ವೇಳೆ ಅವಘಢ ಸಂಭವಿಸಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…