Featured

ಬೆಳ್ಳಾರೆ: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು – Vishwanews24

ಬೆಳ್ಳಾರೆ: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.

ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದ್ದು, ಮತ್ತೆ ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇನ್ನು ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್‌ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದು, ಈ ವೇಳೆ ಅವಘಢ ಸಂಭವಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago