ಗೋಲ್ಡ್ಕೋಸ್ಟ್ : ಈ ಬಾರಿ ಪದಕಗಳ ಸುರಿಮಳೆಯನ್ನೇ ಗೈಯುವ ಹುಮ್ಮಸ್ಸಿನಲ್ಲಿರುವ ಭಾರತ ತಂಡವು ಆರಂಭದ ದಿನವೇ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ. ಇಂದು ನಡೆದ ಪುರುಷರ 56 ಕೆಜಿ ವೆಫ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕದ ಕುಂದಾಪುರದ ಗುರುರಾಜ್ 249 ಕೆಜಿ ಭಾರವನ್ನು ಎತ್ತುವ ಮೂಲಕ ಭಾರತಕ್ಕೆ ಮೊದಲ ಪದಕವನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾನೆ.
ಗುರುರಾಜ್ ಟ್ರಕ್ ಡ್ರೈವರ್ರೊಬ್ಬರ ಮಗನಾಗಿದ್ದು 56 ಕೆಜಿ ವೆಫ್ಟ್ ಲಿಫ್ಟಿಂಗ್ನ ಎರಡು ಸುತ್ತಿನಲ್ಲಿ ಕ್ರಮವಾಗಿ 111 ಕೆಜಿ ಹಾಗೂ 138 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಮಲೇಷ್ಯಾದ ಮೊಹಮ್ಮದ್ ಈಜರ್ ಅಹಮದ್ 261 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರೆ, ಶ್ರೀಲಂಕಾದ ಚರ್ತುರಂಗ ಲಕ್ಮಲ್ (248 ಕೆಜಿ) ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2010ರ ಕಾಮನ್ವೆಲ್ತ್ನ ಹಿರಿಯ ವೆಟ್ಲಿಫ್ಟಿಂಗ್ ಹಾಗೂ 2016ರಲ್ಲಿ ಸೌತ್ ಏಷ್ಯಾನ್ ಗೇಮ್ಸ್ನಲ್ಲಿ ಚಿನ್ನದ ಪದಕ ಸೂರೆಗೊಂಡಿದ್ದ ಗುರುರಾಜ್,. 2017ರಲ್ಲಿ ವ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ಬೀಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…