Featured

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

ಬೆಂಗಳೂರು: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಲ್ಯಾಬ್ ವರದಿ ಬಂದಿದ್ದು, ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದಾಗಿ ದೃಢಪಟ್ಟಿದೆ.

ಇದನ್ನೂ ಓದಿ:

ಬಹುತೇಕ ಬೇಕರಿ ತಿನಿಸುಗಳು ಮತ್ತು ಚಿಪ್ಸ್‌ಗಳಲ್ಲಿ ನಿಷೇಧಿತ ಹಾಗೂ ಮಿತಿಮೀರಿದ ರಾಸಾಯನಿಕ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲಾ ವರ್ಗದ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಲು ಇಂತಹ ಕಲಬೆರಕೆ ಹಾಗೂ ವಿಷಕಾರಿ ಆಹಾರ ಪದ್ಧತಿಯೇ ಮುಖ್ಯ ಕಾರಣ ಎಂದು ಇಲಾಖೆ ತಿಳಿಸಿದ್ದು, ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಆಹಾರ ಇಲಾಖೆಯ ವರದಿ ಪ್ರಕಟವಾದ ಬೆನ್ನಲ್ಲೇ, ನಿಯಮ ಉಲ್ಲಂಘಿಸಿ ವಿಷಕಾರಿ ರಾಸಾಯನಿಕಗಳನ್ನು ಬಳಸುತ್ತಿರುವ ಇಂತಹ ಬೇಜವಾಬ್ದಾರಿ ತಯಾರಕರ ಮತ್ತು ಬೇಕರಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹ ತಯಾರಕರ ಪರವಾನಗಿ ರದ್ದುಪಡಿಸಿ, ಅಂಗಡಿಗಳನ್ನು ತಕ್ಷಣವೇ ಮುಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

20 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago