ಬೆಂಗಳೂರು: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ.
ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಲ್ಯಾಬ್ ವರದಿ ಬಂದಿದ್ದು, ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದಾಗಿ ದೃಢಪಟ್ಟಿದೆ.
ಇದನ್ನೂ ಓದಿ:
ಬಹುತೇಕ ಬೇಕರಿ ತಿನಿಸುಗಳು ಮತ್ತು ಚಿಪ್ಸ್ಗಳಲ್ಲಿ ನಿಷೇಧಿತ ಹಾಗೂ ಮಿತಿಮೀರಿದ ರಾಸಾಯನಿಕ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲಾ ವರ್ಗದ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಲು ಇಂತಹ ಕಲಬೆರಕೆ ಹಾಗೂ ವಿಷಕಾರಿ ಆಹಾರ ಪದ್ಧತಿಯೇ ಮುಖ್ಯ ಕಾರಣ ಎಂದು ಇಲಾಖೆ ತಿಳಿಸಿದ್ದು, ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.
ಆಹಾರ ಇಲಾಖೆಯ ವರದಿ ಪ್ರಕಟವಾದ ಬೆನ್ನಲ್ಲೇ, ನಿಯಮ ಉಲ್ಲಂಘಿಸಿ ವಿಷಕಾರಿ ರಾಸಾಯನಿಕಗಳನ್ನು ಬಳಸುತ್ತಿರುವ ಇಂತಹ ಬೇಜವಾಬ್ದಾರಿ ತಯಾರಕರ ಮತ್ತು ಬೇಕರಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹ ತಯಾರಕರ ಪರವಾನಗಿ ರದ್ದುಪಡಿಸಿ, ಅಂಗಡಿಗಳನ್ನು ತಕ್ಷಣವೇ ಮುಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…