ಚಿಕ್ಕಮಗಳೂರು: ಬೇಟೆಗೆ ತೆರಳಿದ್ದಾಗ ಬಂದೂಕಿನಿಂದ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬನ ಎದೆಗೆ ಗುಂಡು ತಗುಲಿ ಸಾವನ್ನಪ್ಪಿದ ಘಟನೆ ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ಗುಂಡೇಟಿನಿಂದ ಮೃತಪಟ್ಟ ವ್ಯಕ್ತಿಯನ್ನು ಸಂಜಯ್ (35) ಎಂದು ಗುರುತಿಸಲಾಗಿದೆ. ಮೃತ ಸಂಜಯ್ ಕೆರಮಕ್ಕಿ ಗ್ರಾಮದವನಾಗಿದ್ದು, ಸ್ನೇಹಿತರಾದ ನಿಸರ್ಗ ಮತ್ತು ಸುಮನ್ ಎಂಬವರ ಜೊತೆ ಕಾಡು ಹಂದಿಯ ಶಿಕಾರಿಗೆ ತೆರಳಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ.
ಈ ಸಂಬಂಧ ಪೊಲಿಸರು ನಿಸರ್ಗ ಮತ್ತು ಸುಮನ್ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಚುನಾವಣೆ ಹಿನ್ನೆಲೆ ಬಂದೂಕನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು ಎಂಬ ನಿಯಮವಿದೆ. ಆದರೂ ಯುವಕರು ನಿಯಮವನ್ನು ಗಾಳಿಗೆ ತೂರಿ ಬಂದೂಕನ್ನು ಇಟ್ಟುಕೊಂಡಿದ್ದರು. ಅಲ್ಲದೇ ಅಕ್ರಮವಾಗಿ ಶಿಕಾರಿಗೆ ತೆರಳಿದ್ದರು. ಘಟನೆ ನಡೆದ ತಕ್ಷಣ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಬಿದ್ದು ನಿಸರ್ಗ ಎಂಬಾತನ ಕೈ ಮೂಳೆ ಮುರಿದಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಮಲ್ಲಂದೂರು ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…