ಬೆಂಗಳೂರು: ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಅದನ್ನು ನಾನು ಸಚಿವ ಅಲ್ಲ ಓರ್ವ ಶಾಸಕನಾಗಿ ಗೌರವಿಸುತ್ತೇನೆ. ನ್ಯಾಯಾಲಯ ಸ್ಪೀಕರ್ ಅಧಿಕಾರ ಏನು ಅನ್ನೋದನ್ನ ಎತ್ತಿ ಹಿಡಿದಿದೆ ಎಂದು ಜಲ ಸಂಪಲ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ..
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರು ಕಲಾಪಕ್ಕೆ ಹೋಗಬಹುದು ಬಿಡಬಹುದು. ಆದರೆ, ಪಕ್ಷದ ಕೈಯಲ್ಲಿ ವಿಪ್ ಇದೆಯಲ್ಲ. ಅನರ್ಹತೆಯೇ ಬೇರೆಯ ಕಾನೂನಾಗಿದ್ದು, ನಾನು ನನ್ನ ಶಾಸಕರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಅವರನ್ನು ನಾನು ರೆಬೆಲ್ ಶಾಸಕರು ಎಂದು ಒಪ್ಪಿಕೊಳ್ಳುವುದಿಲ್ಲ, ಅವರು ನನ್ನ ಸ್ನೇಹಿತರು ಎಂದು ಹೇಳಿದ್ದಾರೆ.
ಬೇರೆಯವರ ನಂಬಿ ಹೋಗಬೇಡಿ. ನಿಮ್ಮ ಮೇಲೆ ಮಂಗನ ಟೋಪಿ ಹಾಕುತ್ತಾರೆ. ಅನರ್ಹತೆ ಅನ್ನೋದು ಒಂದು ಇದೆ ಅಲ್ವಾ. ಅನರ್ಹ ಆದರೆ ನೀವು ಮತ್ತೆ ಮಂತ್ರಿ ಆಗಲು ಸಾಧ್ಯವಿಲ್ಲ.
ಹೀಗಾಗಿ ನಿಮ್ಮನ್ನು ಗೆಲ್ಲಿಸಿರುವ ಜನರ ಮುಖ, ನಿಮ್ಮ ಕುಟುಂಬದವರ ಮುಖ ನೋಡಿ ನೀವು ಅನರ್ಹತೆಯ ಅಸ್ತ್ರಕ್ಕೆ ಬಲಿಯಾಗಬೇಡಿ. ವಿಶ್ವಾಸ ಮತದ ಬಗ್ಗೆ ನಾಳೆ ಮಾತನಾಡೋಣ ಎಂದು ಶಾಸಕ ಮಿತ್ರರಲ್ಲಿ ಮನವಿ ಮಾಡುವ ಮೂಲಕ ಡಿಕೆಶಿ ಅವರು ಪರೋಕ್ಷವಾಗಿ ಅನಹರ್ತೆಯ ಭಯ ಹುಟ್ಟಿಸಿದ್ದಾರೆ.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…