ಬೆಳಗಾವಿ: ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ 2021’ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ಬಗ್ಗೆ ಸುವರ್ಣ ಸೌಧದಲ್ಲಿ ನಡೆದ ಚರ್ಚೆ ವೇಳೆ ಕಾಯ್ದೆಯು ಏನನ್ನು ಹೇಳುತ್ತದೆ ಎಂಬ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ.
ಬೇರೆ ಧರ್ಮ ಸ್ವೀಕರಿಸುವವರಿಗೆ ಅವರ ಮೂಲ ಧರ್ಮದಲ್ಲಿ ಇದ್ದ ಹಕ್ಕು ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಗೃಹ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ದಲಿತ ವ್ಯಕ್ತಿಯೋರ್ವ ಮತಾಂತರವಾದರೆ ಪರಿಶಿಷ್ಟ ಜಾತಿಗಳಿಗೆ ಸರ್ಕಾರದಿಂದ ಸಿಗುತ್ತಿದ್ದ ಎಲ್ಲ ರೀತಿಯ ಸೌಲಭ್ಯಗಳನ್ನು ಹಿಂಪಡೆಯಲಾಗುತ್ತದೆ. ಶಿಕ್ಷಣ, ಉದ್ಯೋಗ, ಹಾಗೂ ಬಡ್ತಿಯಲ್ಲಿ ನೀಡಲಾಗುವ ಮೀಸಲಾತಿ ಕೂಡ ಮತಾಂತರ ಹೊಂದಿದವರಿಗೆ ಸಿಗೋದಿಲ್ಲ. ಮೂಲ ಮತದ ಹಕ್ಕು, ಕೂಡ ಅವರಿಗೆ ಇರೋದಿಲ್ಲ ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ.
ಇನ್ನು ಒತ್ತಾಯ ಅಥವಾ ಆಮಿಷದ ಮತಾಂತರ ಮಾಡಿದಲ್ಲಿ ಅಂತವರಿಗೆ 3ರಿಂದ 10ವರ್ಷಗಳ ಜೈಲು ಹಾಗೂ 10ಲಕ್ಷ ದಂಡ. ಮತಾಂತರದಿಂದ ಬಲಿಯಾದರೆ ಆಪಾದಿತರಿಂದ ಗರಿಷ್ಠ 5 ಲಕ್ಷಗಳವರೆಗೆ ಪರಿಹಾರ ಹಾಗೂ ನ್ಯಾಯಾಲಯ ನೀಡುವ ಶಿಕ್ಷೆಗೆ ಗುರಿಯಾಗಬೇಕು ಎಂದು ಆರಗ ಜ್ಞಾನೇಂದ್ರ ವಿವರಿಸಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…