Featured

ಬೇರೆ ಧರ್ಮ ಸ್ವೀಕರಿಸುವವರಿಗೆ ಅವರ ಮೂಲ ಧರ್ಮದಲ್ಲಿ ಇದ್ದ ಹಕ್ಕು ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ : ಆರಗ ಜ್ಞಾನೇಂದ್ರ – Vishwanews24

ಬೇರೆ ಧರ್ಮ ಸ್ವೀಕರಿಸುವವರಿಗೆ ಅವರ ಮೂಲ ಧರ್ಮದಲ್ಲಿ ಇದ್ದ ಹಕ್ಕು ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ : ಆರಗ ಜ್ಞಾನೇಂದ್ರ – Vishwanews24

ಬೆಳಗಾವಿ: ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣಾ ವಿಧೇಯಕ 2021’ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಈ ಬಗ್ಗೆ ಸುವರ್ಣ ಸೌಧದಲ್ಲಿ ನಡೆದ ಚರ್ಚೆ ವೇಳೆ ಕಾಯ್ದೆಯು ಏನನ್ನು ಹೇಳುತ್ತದೆ ಎಂಬ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ.

ಬೇರೆ ಧರ್ಮ ಸ್ವೀಕರಿಸುವವರಿಗೆ ಅವರ ಮೂಲ ಧರ್ಮದಲ್ಲಿ ಇದ್ದ ಹಕ್ಕು ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕಳೆದುಕೊಳ್ಳುತ್ತಾರೆ ಎಂದು ಗೃಹ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ದಲಿತ ವ್ಯಕ್ತಿಯೋರ್ವ ಮತಾಂತರವಾದರೆ ಪರಿಶಿಷ್ಟ ಜಾತಿಗಳಿಗೆ ಸರ್ಕಾರದಿಂದ ಸಿಗುತ್ತಿದ್ದ ಎಲ್ಲ ರೀತಿಯ ಸೌಲಭ್ಯಗಳನ್ನು ಹಿಂಪಡೆಯಲಾಗುತ್ತದೆ‌. ಶಿಕ್ಷಣ, ಉದ್ಯೋಗ, ಹಾಗೂ ಬಡ್ತಿಯಲ್ಲಿ ನೀಡಲಾಗುವ ಮೀಸಲಾತಿ ಕೂಡ ಮತಾಂತರ ಹೊಂದಿದವರಿಗೆ ಸಿಗೋದಿಲ್ಲ. ಮೂಲ ಮತದ ಹಕ್ಕು, ಕೂಡ ಅವರಿಗೆ ಇರೋದಿಲ್ಲ ಎಂದು ಆರಗ ಜ್ಞಾನೇಂದ್ರ ಸದನದಲ್ಲಿ ಸ್ಪಷ್ಟಪಡಿಸಿದ್ದಾರೆ.

ಇನ್ನು ಒತ್ತಾಯ ಅಥವಾ ಆಮಿಷದ ಮತಾಂತರ ಮಾಡಿದಲ್ಲಿ ಅಂತವರಿಗೆ 3ರಿಂದ 10ವರ್ಷಗಳ ಜೈಲು ಹಾಗೂ 10ಲಕ್ಷ ದಂಡ. ಮತಾಂತರದಿಂದ ಬಲಿಯಾದರೆ ಆಪಾದಿತರಿಂದ ಗರಿಷ್ಠ 5 ಲಕ್ಷಗಳವರೆಗೆ ಪರಿಹಾರ ಹಾಗೂ ನ್ಯಾಯಾಲಯ ನೀಡುವ ಶಿಕ್ಷೆಗೆ ಗುರಿಯಾಗಬೇಕು ಎಂದು ಆರಗ ಜ್ಞಾನೇಂದ್ರ ವಿವರಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago