ಬೆಂಗಳೂರು: 2023-24ರ ಅವಧಿಯಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮದು ಸಾಲದ ಪ್ರಮಾಣ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಸಿಎಂ ಅಂಕಿ ಅಂಶ ಸಮೇತ ಉತ್ತರಿಸಿದರು.
ಯಾವುದೇ ಸರ್ಕಾರ ತನ್ನ ಕೆಲಸಗಳಿಗೆ ಹಣ ಖರ್ಚು ಮಾಡಲು ಸಾಲ ಮಾಡಬೇಕಾಗುತ್ತದೆ. ಸಾಮರ್ಥ್ಯ ನೋಡಿಕೊಂಡು ಸಾಲ ಮಾಡಬೇಕು. ಎಷ್ಟು ಸಾಲ ಕೊಡಬೇಕು ಅಂತ ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ. ಅದರ ಪ್ರಕಾರ ನಾವು ಸಾಲ ಪಡೆಯುತ್ತೇವೆ, ಸಾಲದ ಮಿತಿ ಕೊಟ್ಟಷ್ಟು ಸಾಲ ಪಡೆದಿದ್ದೇವೆ. ನಿಯಮದ ಪ್ರಕಾರ 3 ಮಾನದಂಡ ನಿಗದಿಯಾಗಿದೆ. ನಮ್ಮಲ್ಲಿ ವಿತ್ತೀಯ ಕೊರತೆಯು 2024-25ರಲ್ಲಿ 2.9% ಇದೆ, 2023-24ರಲ್ಲಿ 2.6% ಇತ್ತು ಎಂದು ತಿಳಿಸಿದರು.
2023-24 ರಲ್ಲಿ ನಮ್ಮದು ಒಟ್ಟು ಸಾಲ 90,280 ಕೋಟಿ ರೂ. ಇತ್ತು. 2024-25ರಲ್ಲಿ 1.4 ಲಕ್ಷ ಕೋಟಿ ರೂ. ಸಾಲ ಮಾಡಿದ್ದೇವೆ. ಆಂಧ್ರ, ಅಸ್ಸಾಂ, ಹಿಮಾಲಯ ಪ್ರದೇಶ, ಕೇರಳ, ಮಹಾರಾಷ್ಟ್ರ, ಮಧ್ಯ ಪ್ರದೇಶ, ತಮಿಳುನಾಡು ಸೇರಿ ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮ ಸಾಲದ ಪ್ರಮಾಣ ಕಡಿಮೆ ಎಂದು ಸಿಎಂ ಹೇಳಿದರು.
ಅನಗತ್ಯ ಖರ್ಚಿಗೆ ಕಡಿವಾಣ:
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಬಜೆಟ್ನಲ್ಲಿ ಒದಗಿಸಲಾಗಿದೆ. ಇದು ಹೆಚ್ಚಾಗಬಹುದು. ಹೆಚ್ಚಾದರೆ ಪೂರಕ ಬಜೆಟ್ನಲ್ಲಿ ಸೇರಿಸಿಕೊಳ್ತೀವಿ. ಗ್ಯಾರಂಟಿಯಿಂದ ರಾಜ್ಯದ ಬೊಕ್ಕಸ ಖಾಲಿ ಆಯ್ತು ಅಂತ ವಿಪಕ್ಷಗಳು ಆರೋಪ ಮಾಡುತ್ತಿವೆ. ಇದರಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿಗೆ ಹಣ ಇದೆ, ರಾಜ್ಯದಲ್ಲಿ ಈ ವರ್ಷ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಆಗಿದೆ. ಇದರಲ್ಲಿ 1.20 ಲಕ್ಷ ಕೋಟಿ ರೂ. ಅಭಿವೃದ್ಧಿಗೆ ಬಳಕೆ ಮಾಡ್ತಿದ್ದೇವೆ. ಇನ್ನೂ ಈ ಬಾರಿ 14 ಸಾವಿರ ಕೋಟಿ ರೂ. ವಿತ್ತೀಯ ಕೊರತೆ ಆಗಿದ್ದು, ಅನಗತ್ಯ ಖರ್ಚಿಗೆ ಕಡಿವಾಣ ಹಾಕಿ, ಸರಿ ದೂಗಿಸುತ್ತೇವೆ ಎಂದು ಸಿಎಂ ವಿವರಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…