ಬೆಂಗಳೂರು : ಬೇಸಿಗೆ ಆರಂಭವಾಗುತ್ತಲೇ ತಂಪಾಗಲು ಕಲ್ಲಂಗಡಿ ಹಣ್ಣು, ಜ್ಯೂಸ್ ಮತ್ತು ಐಸ್ ಕ್ರೀಂ ಸೇವಿಸಲು ಯೋಜಿಸುತ್ತಿದ್ದರೆ, ಸ್ವಲ್ಪ ಎಚ್ಚರಿಕೆ ವಹಿಸಬೇಕು. ಏಕೆಂದರೆ, ನೀವು ಖುಷಿಯಿಂದ ಸವಿಯುವ ಈ ಆಹಾರಗಳು ನಿಜಕ್ಕೂ ಸುರಕ್ಷಿತವೋ ಎಂದು ಆರೋಗ್ಯ ಇಲಾಖೆ ಸಂಶಯ ವ್ಯಕ್ತಪಡಿಸಿದೆ. ಹೀಗಾಗಿ ಸದ್ಯದಲ್ಲೇ ಈ ಉತ್ಪನ್ನಗಳ ಸ್ಯಾಂಪಲ್ ಟೆಸ್ಟ್ ನಡೆಸಲು ತೀರ್ಮಾನಿಸಲಾಗಿದೆ.
ಬೇಸಿಗೆ ದಿನಗಳಲ್ಲಿ ಕಲ್ಲಂಗಡಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ವ್ಯಾಪಾರಿಗಳು ಹೆಚ್ಚು ಮಾರಾಟ ಮಾಡಲು ಮತ್ತು ಗ್ರಾಹಕರನ್ನು ಆಕರ್ಷಿಸಲು ಕೃತಕ ಬಣ್ಣಗಳನ್ನು ಬಳಸುವ ಪ್ರಕರಣಗಳು ಪತ್ತೆಯಾಗಿವೆ. ಕೆಲವು ಮೂಲಗಳ ಪ್ರಕಾರ, ಕಲ್ಲಂಗಡಿ ಹಣ್ಣಿನ ಬಳ್ಳಿಗೆ ಎರಿಥ್ರೋಸಿನ್ ಇಂಜೆಕ್ಷನ್ ಮಾಡಲಾಗುತ್ತದೆ. ಇಂತಹ ಹಣ್ಣಿನಲ್ಲಿ ನೈಟ್ರೇಟ್, ಕೃತಕ ಡೈ (ಕ್ರೋಮೇಟ್, ಮೆಥನಾಲ್ ಹಳದಿ, ಸುಡಾನ್ ಕೆಂಪು) ಮತ್ತು ಆಕ್ಸಿಟಾಸಿನ್ ಇರುವ ಸಾಧ್ಯತೆ ಇದೆ, ಇದು ಹೊಟ್ಟೆ ಮತ್ತು ಶರೀರದ ಆರೋಗ್ಯಕ್ಕೆ ಹಾನಿಕರವಾಗಿದೆ.
ಕಲ್ಲಂಗಡಿ ಬೇಗನೆ ಬೆಳೆಯಲು ನಿಟ್ರೋಜನ್ ಬಳಕೆಯಾಗುತ್ತದೆ. ನಿಟ್ರೋಜನ್ ದೇಹಕ್ಕೆ ಹೋದರೆ ವಿಷಕಾರಿ ಪರಿಣಾಮ ಉಂಟುಮಾಡಬಹುದು. ಕ್ರೋಮೇಟ್, ಮೆಂಥಾಲ್ ಯಲ್ಲೋ ಮತ್ತು ಸುಡಾನ್ ರೆಡ್ ಬಣ್ಣವು ಹಣ್ಣುಗಳಿಗೆ ಆಕರ್ಷಕವಾದ ಕೆಂಪು ಬಣ್ಣ ನೀಡಲು ಉಪಯೋಗಿಸುತ್ತಾರೆ. ಕಾರ್ಬೈಡ್ ಕಿಡ್ನಿ ಮತ್ತು ಯಕೃತ್ಗೆ ತೀವ್ರ ಹಾನಿಕರವಾಗಿದ್ದು, ಮೆಂಥಾಲ್ ಯಲ್ಲೋ ಕ್ಯಾನ್ಸರ್ ಉಂಟುಮಾಡುವ ಅಪಾಯವಿರುತ್ತದೆ ಎಂದು ಆಹಾರ ತಜ್ಞ ಡಾ. ಕೀರ್ತಿ ಹಿರಿಸಾವೆ ತಿಳಿಸಿದ್ದಾರೆ.
ಗ್ರಾಹಕರು ಯಾವ ಆಹಾರ ಸೇವಿಸಬೇಕು ಮತ್ತು ಯಾವದು ತಪ್ಪಿಸಬೇಕು ಎಂಬ ವಿಚಾರದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಂಜೆಕ್ಷನ್ ಪಡೆದ ಹಣ್ಣುಗಳು ಗಾಢ ಕೆಂಪು ಬಣ್ಣದಲ್ಲಿ ಕಾಣಿಸುತ್ತವೆ. ಮನೆಯಲ್ಲಿಯೇ ಪರೀಕ್ಷೆ ಮಾಡಲು ಹಣ್ಣನ್ನು ಎರಡು ಭಾಗಕ್ಕೆ ಕತ್ತರಿಸಿ ಟಿಶ್ಯೂ ಅಥವಾ ಕಾಟನ್ ಪೇಪರ್ ಮೇಲೆ ಬಣ್ಣ ಹತ್ತಿದರೆ, ಅದು ಕೃತಕ ಬಣ್ಣ ಬಳಕೆಯಾಗಿರುವುದಾಗಿ ತೋರಿಸುತ್ತದೆ. ಆರೋಗ್ಯ ಇಲಾಖೆ ಕಲ್ಲಂಗಡಿ ಹಣ್ಣು, ಜ್ಯೂಸ್ ಮತ್ತು ಐಸ್ ಕ್ರೀಂಗಳಿಗೆ ಪರೀಕ್ಷೆ ನಡೆಸಲು ಸಿದ್ಧವಾಗಿದೆ. ಬೇಸಿಗೆ ಶುರುವಾತಿನಲ್ಲಿ ತಕ್ಷಣ ಎಚ್ಚರಿಕೆಯಿಂದಿರಲು ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…