Featured

ಬೇಸಿಗೆ ಶಿಬಿರ ಮಕ್ಕಳ ಮನೋವೃದ್ಧಿಗೆ ಪೂರಕ : ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ

ಬೇಸಿಗೆ ಶಿಬಿರ ಮಕ್ಕಳ ಮನೋವೃದ್ಧಿಗೆ ಪೂರಕ : ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ), ರಾಷ್ಟೀಯ ಸ್ವ-ಸಹಾಯ ಸಂಘಗಳ ತರಬೇತಿ ಸಂಸ್ಥೆ, NIST ಉಡುಪಿ ಇವರ ಆಶ್ರಯದಲ್ಲಿ ದಿನಾಂಕ: ೧೭.೦೪.೨೦೨೨ ರಿಂದ ೨೪.೦೪.೨೦೨೨ರವರೆಗೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು,ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಶೇಷ ಅತಿಥಿಯಾಗಿ ಆಗಮಿಸಿದ ಬಾಲ ನಟಿ ಹಾಗೂ ಡ್ರಾಮ ಜೂನಿಯರ್ ಪ್ರಶಸ್ತಿ ವಿಜೇತೆ ಕುಮಾರಿ ಚಿತ್ರಾಲಿ ತೇಜ್‌ಪಾಲ್, ಮಂಗಳೂರು ಇವರು ನೆರವೇರಿಸಿದರು.

ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಶ್ರೀ ಚರಣ್ ರಾಜ್, ಪ್ರಬಂಧಕರು, ಬ್ಯಾಂಕ್ ಆಫ್ ಬರೋಡ ಮುಖ್ಯ ಶಾಖೆ, ಉಡುಪಿ ಹಾಗೂ ಶ್ರೀ ರಾಜೇಶ್ ಶೆಟ್ಟಿ, ಅಲೆವೂರು, ಅಧ್ಯಕ್ಷರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶ್ರೀಮತಿ ವೀಣಾ ವಿವೇಕಾನಂದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಉಡುಪಿ ಶ್ರೀ ಉಲ್ಲಾಸ್ ಮೇಸ್ತ, ಪ್ರಾಂಶುಪಾಲರು, ರಾಷ್ಟ್ರೀಯ ಸ್ವ-ಸಹಾಯ ಸಂಘಗಳ ತರಬೇತಿ ಸಂಸ್ಥೆ NIST) ಉಡುಪಿ ಇವರು ಉಪಸ್ಥಿತರಿದ್ದರು.

ಎಂಟು ದಿನದ ತರಬೇತಿಯಲ್ಲಿ ಮಕ್ಕಳಿಗೆ ಕರಕುಶಲತೆ, ಚಿತ್ರಕಲೆ, ಹಾಡು, ನೃತ್ಯ, ನಟನೆ, ಪ್ರಾಚೀನ ಆಟಗಳ ಪರಿಚಯ, ಕುಣಿತ ಭಜನೆ, ಮಣ್ಣಿನ ಕಲಾಕೃತಿಗಳ ರಚನೆ, ಹಳ್ಳಿಯ ಆಟಗಳು, ಅಜ್ಜಿ-ಕತೆಗಳು, ನೈತಿಕ ಮೌಲ್ಯಗಳು, ಚಿತ್ರಕತೆ ರಚನೆ, ಮಾತೃವಂದನಾ ಕಾರ್ಯಕ್ರಮ, ಪಾಲಕರ ಒಡನಾಟದ ಆಟಗಳು, ತಾಯಿಯ ಕೈತುತ್ತು, ಪ್ರತಿದಿನ ಮೌನ ಭೋಜನ, ಪ್ರತಿಭಾ ಪ್ರದರ್ಶನ ನಡೆಯಲಿದೆ.ಈ ಶಿಬಿರವು ಎಂಟು ದಿನಗಳ ಕಾಲ ನಡೆಯಲಿದ್ದು ನುರಿತ ತಜ್ಞರು ಈ ತರಬೇತಿಯನ್ನು ನೀಡಲಿದ್ದಾರೆ. ತರಬೇತಿಯಲ್ಲಿ ಸಂಸ್ಕೃತಿ- ಸಂಸ್ಕಾರ ಏಕಾಗ್ರತೆ ಮೂಡಿಸುವ ಚಟುವಟಿಕೆಗಳನ್ನು ಆಯೋಜಿಸಲಾಗದೆ ಎಂದು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಉಲ್ಲಾಸ್ ಮೇಸ್ತರವರು ತಿಳಿಸಿ ಶಿಬಿರದ ಉದ್ದೇಶಗಳ ಬಗ್ಗೆ ಮಾತಾನಾಡಿ ಸ್ವಾಗತಿಸಿದರು.

ಆಗಮಿಸಿದ ಮುಖ್ಯ ಅತಿಥಿಗಳು ಎಲ್ಲಾ ಮಕ್ಕಳಿಗೆ ಶುಭಕೋರಿದರು.. ಕಾರ್ಯಕ್ರಮದ ನಿರೂಪರಣೆಯನ್ನು ಉಪನ್ಯಾಸಕಾರದ ಶ್ರೀರಮೇಶ್‌ರವರು ನೆರವೇರಿಸಿ, ರಂಗತರಬೇತುದಾರರಾದ ಶ್ರೀ ಚಂದ್ರಹಾಸ್ ಭಂಡಾರಿಯವರು ಧನ್ಯವಾದವನ್ನಿತ್ತರು. ಈ ಸಂದರ್ಭದಲ್ಲಿ ಬಾಲನಟಿ ಕುಮಾರಿ ಚಿತ್ರಾಲಿ ತೇಜ್‌ಪಾಲ್‌ರನ್ನು ಅಭಿನಂದಿಸಲಾಯಿತು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

21 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

21 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

22 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

23 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

23 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

23 hours ago