ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹಿಂದಿನಿಂದಲೂ ಕೂಡಾ ಶಿವಮೊಗ್ಗ ಕ್ಷೇತ್ರದ ಬೈಂದೂರಿಗೆ ಸಾಕಷ್ಟು ಅನುದಾನಗಳು ಬಂದಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಾಗಿದೆ. ಕಳೆದ ಚುನಾವಣೆಗಳಲ್ಲಿ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಅಂತರವನ್ನು ತಂದುಕೊಟ್ಟ ಕ್ಷೇತ್ರ ಎಂದರೆ ಅದು ಬೈಂದೂರು ಎಂದರು.
ಮಾ.12ರಂದು ನೆಂಪುವಿನಲ್ಲಿರುವ ಶಾಸಕರ ನಿವಾಸದಲ್ಲಿ ನಡೆದ ವಂಡ್ಸೆ, ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ಕಾರ್ಯಕರ್ತರ, ಜನರ ಬಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…