ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹಿಂದಿನಿಂದಲೂ ಕೂಡಾ ಶಿವಮೊಗ್ಗ ಕ್ಷೇತ್ರದ ಬೈಂದೂರಿಗೆ ಸಾಕಷ್ಟು ಅನುದಾನಗಳು ಬಂದಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಾಗಿದೆ. ಕಳೆದ ಚುನಾವಣೆಗಳಲ್ಲಿ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಅಂತರವನ್ನು ತಂದುಕೊಟ್ಟ ಕ್ಷೇತ್ರ ಎಂದರೆ ಅದು ಬೈಂದೂರು ಎಂದರು.
ಮಾ.12ರಂದು ನೆಂಪುವಿನಲ್ಲಿರುವ ಶಾಸಕರ ನಿವಾಸದಲ್ಲಿ ನಡೆದ ವಂಡ್ಸೆ, ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ಕಾರ್ಯಕರ್ತರ, ಜನರ ಬಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…