ಬೈಂದೂರು: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ರೂ 4.02 ಲಕ್ಷ ಮೌಲ್ಯದ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ ವ್ಯಕ್ತಿಯ ವಿರುದ್ದ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ ಅವರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾಲ್ತೋಡು ಗ್ರಾಮದ ಬೋಳಂಬಳ್ಳಿ ಎಂಬಲ್ಲಿನ ಪ್ರಥ್ವಿರಾಜ್ ಜೈನ್ ಎಂಬವರಿಗೆ ಸಂಬಂಧಿಸಿದ ಪ್ರಥ್ವಿ ಗೇರು ಬೀಜ ಕಾರ್ಖಾನೆಯ ಗೋದಾಮಿನಲ್ಲಿ ಕಿರಿಮಂಜೇಶ್ವರ ನಿವಾಸಿ ಅಯೂಬ್ (32) ಎಂಬ ವ್ಯಕ್ತಿ ಎಂಬಾತನು ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ ಸ್ಥಳಕ್ಕೆ ದಾಳಿ ನಡೆಸಿ ಪ್ರಥ್ವಿರಾಜ್ ಜೈನ್ ರವರಿಗೆ ಸಂಬಂಧಿಸಿದ ಪ್ರಥ್ವಿ ಗೇರು ಬೀಜ ಕಾರ್ಖಾನೆಯ ಗೋದಾಮಿನಲ್ಲಿದ್ದ 4,02,000/- ರೂಪಾಯಿ ಮೌಲ್ಯದ 335 ಚೀಲ (16750 ಕೆಜಿ) ಯಷ್ಟು ಅಕ್ಕಿಯನ್ನು ಮತ್ತು ಇಲೆಕ್ಟ್ರಾನಿಕ್ ತೂಕದ ಯಂತ್ರ, ಚೀಲ ಹೊಲಿಯುವ ಯಂತ್ರ ಹಾಗೂ 10 ಗೋಣಿ ಚೀಲಗಳನ್ನು ಸ್ವಾಧೀನಪಡಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…