ಬೈಂದೂರು: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ರೂ 4.02 ಲಕ್ಷ ಮೌಲ್ಯದ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ ವ್ಯಕ್ತಿಯ ವಿರುದ್ದ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ಆಹಾರ ನಿರೀಕ್ಷಕರಾದ ವಿನಯ್ ಕುಮಾರ್ ಅವರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾಲ್ತೋಡು ಗ್ರಾಮದ ಬೋಳಂಬಳ್ಳಿ ಎಂಬಲ್ಲಿನ ಪ್ರಥ್ವಿರಾಜ್ ಜೈನ್ ಎಂಬವರಿಗೆ ಸಂಬಂಧಿಸಿದ ಪ್ರಥ್ವಿ ಗೇರು ಬೀಜ ಕಾರ್ಖಾನೆಯ ಗೋದಾಮಿನಲ್ಲಿ ಕಿರಿಮಂಜೇಶ್ವರ ನಿವಾಸಿ ಅಯೂಬ್ (32) ಎಂಬ ವ್ಯಕ್ತಿ ಎಂಬಾತನು ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ ಸ್ಥಳಕ್ಕೆ ದಾಳಿ ನಡೆಸಿ ಪ್ರಥ್ವಿರಾಜ್ ಜೈನ್ ರವರಿಗೆ ಸಂಬಂಧಿಸಿದ ಪ್ರಥ್ವಿ ಗೇರು ಬೀಜ ಕಾರ್ಖಾನೆಯ ಗೋದಾಮಿನಲ್ಲಿದ್ದ 4,02,000/- ರೂಪಾಯಿ ಮೌಲ್ಯದ 335 ಚೀಲ (16750 ಕೆಜಿ) ಯಷ್ಟು ಅಕ್ಕಿಯನ್ನು ಮತ್ತು ಇಲೆಕ್ಟ್ರಾನಿಕ್ ತೂಕದ ಯಂತ್ರ, ಚೀಲ ಹೊಲಿಯುವ ಯಂತ್ರ ಹಾಗೂ 10 ಗೋಣಿ ಚೀಲಗಳನ್ನು ಸ್ವಾಧೀನಪಡಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…