ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ನಡೆದಿದ್ದು ದೂರು ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಬರ್ಸಿ ಜಟಾನ್ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್ನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರು ಬಹುತೇಕ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ತಾನ ಕಡೆಗಳಲ್ಲಿ ಇಂತಹ ಕುಕೃತ್ಯಗಳನ್ನು ಎಸಗಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ.
ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು.
ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಸೂಚನೆಯಂತೆ, ಬೈಂದೂರು ಪೊಲೀಸ್ ಠಾಣೆ ಪಿಎಸ್ಐ ತಿಮ್ಮೇಶ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾರ್, ಮಾಳಪ್ಪ, ಸೂರ ನಾಯ್ಕ್, ನಾಗಶ್ರೀ, ಶ್ರೀಧರ ಪಾಟೀಲ್ ಹಾಗೂ ಕುಂದಾಪುರ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದರು
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…
ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…
ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ…
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…