ಬೈಂದೂರು: ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ.
ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಂತಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…