Featured

ಬೈಂದೂರು: ಕಾರಿನ ಜೊತೆ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಮಹಿಳೆ ಸೇರಿ ಮೂವರ ಬಂಧನ -Vishwanews24

ಬೈಂದೂರು: ಕಾರಿನ ಜೊತೆ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಮಹಿಳೆ ಸೇರಿ ಮೂವರ ಬಂಧನ

ಬೈಂದೂರು : ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯ 4 ದಿನಗಳ ಪೊಲೀಸ್ಟ ಕಸ್ಟಡಿಗೆ ನೀಡಿದೆ.

ಸುಟ್ಟು ಹೋದ ಕಾರಿನ ಚೆಸ್ಸಿಯನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಪರಿಶೀಲಿಸಿ, ಮಾಲಕನ ವಿವರಗಳನ್ನು ಪತ್ತೆಹಚ್ಚಲಾಗಿತ್ತು. ಕಾರಿನ ಮಾಲಕ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರೆಗಾರ್ (54) ಎಂದು ಗುರುತಿಸಲಾಗಿದ್ದು ಆತನೇ ಕಾರಿಗೆ ಬೆಂಕಿ ಹಚ್ಚಿ ಕಾರ್ಕಳ ಮೂಲದ ಮೇಸ್ತ್ರಿ ಆನಂದ ದೇವಾಡಿಗ (55) ಎಂಬಾತನನ್ನು ಕೊಲೆಗೈದಿದ್ದಾನೆ ಎಂಬುದು ದೃಢಪಟ್ಟಿದೆ. ಘಟನೆಯ ಸಂಬಂಧ ಸದಾನಂದ ಶೇರುಗಾರ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಮಹಿಳೆ ಶಿಲ್ಪಾ (34) ಎಂಬಾಕೆಯನ್ನು ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಕಳದಲ್ಲಿ ಸರ್ವೇಯರ್ ಆಗಿದ್ದ ಸದಾನಂದ ಶೇರೆಗಾರ್ ಜಾಗ ಹಾಗೂ ಹಣದ ವಿಚಾರದಲ್ಲಿನ ಅವ್ಯವಹಾರವನ್ನು ಮುಚ್ಚಿಹಾಕಲು, ಬೇರೊಬ್ಬ ವ್ಯಕ್ತಿಯನ್ನು ತನ್ನ ಕಾರಿನಲ್ಲಿ ಕೂರಿಸಿ ಬೆಂಕಿ ಹಚ್ಚಿ ಕೊಲೆಗೈಯುವ ಪ್ಲಾನ್ ಸೃಷ್ಟಿಸಿದ್ದ. ಮೇ.12ರಂದು ತನಗೆ ಆಪ್ತವಾಗಿದ್ದ ಶಿಲ್ಪ ಎಂಬ ಮಹಿಳೆಯ ಸಹಕಾರ ಪಡೆದು, ಆಕೆಯ ಸ್ನೇಹಿತ ಕಾರ್ಕಳದಲ್ಲಿ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನದ ನಂತರ ಕಾರ್ಕಳದ ಬಾರೊಂದಕ್ಕೆ ಕರೆಯಿಸಿ ಕಂಠಪೂರ್ತಿ ಕುಡಿಸಿದ್ದರು. ರಾತ್ರಿಯಾಗುತ್ತಿದ್ದಂತೆ ಆತನನ್ನು ಪುಸಲಾಯಿಸಿ ನಿದ್ರೆ ಮಾತ್ರೆಯನ್ನು ನುಂಗಿಸಿ ಬೈಂದೂರಿನ ಕಡೆಗೆ ಬಂದಿದ್ದರು. ಮಂಗಳವಾರ ರಾತ್ರಿ 12.30ರ ಸುಮಾರಿಗೆ ಸಾಸ್ತಾನ ಟೋಲ್ ಗೇಟಿನಲ್ಲಿ ಬೈಂದೂರು ಕಡೆಗೆ ತೆರಳಿರುವುದು ದೃಡಪಟ್ಟಿದ್ದಲ್ಲದೇ, ಟೋಲ್ ಗೇಟಿನಲ್ಲಿ ಮಹಿಳೆಯೋರ್ವಳು ಕಾರಿನಿಂದ ಇಳಿದು ಟೋಲ್ ನೀಡಿರುವ ದೃಶ್ಯ ಸೆರೆಯಾಗಿತ್ತು. ಅಲ್ಲಿಂದ ಬೈಂದೂರು ಒತ್ತಿನಣೆ ಸಮೀಪ ಹೇನುಬೇರು ನಿರ್ಜನ ಪ್ರದೇಶವೆಂಬದು ಅರಿತು ಅಲ್ಲಿಯೇ ಕಾರು ತಂದು ನಿಲ್ಲಿಸಿದ್ದಾರೆ. ನಿದ್ರೆ ಮಾತ್ರೆಯ ಮಂಪರಿನಲ್ಲಿದ್ದ ವ್ಯಕ್ತಿ ಕಾರಿನ ಒಳಕ್ಕೆ ಇರುವಾಗಲೇ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲಿಂದ ಪರಾರಿಯಾಗಿದ್ದಾರೆ.

ನಂತರ ತಲೆಮರೆಸಿಕೊಳ್ಳುವ ಸಲುವಾಗಿ ಬೆಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದ ಸದಾನಂದ ಹಾಗೂ ಶಿಲ್ಪ, ಬಸ್ ಹಾಳಾಗಿದ್ದರಿಂದ ಮತ್ತೆ ಮೂಡುಬಿದಿರೆಗೆ ವಾಪಾಸಾಗಿದ್ದಾರೆ. ಅಲ್ಲಿಂದ ಕಾರ್ಕಳಕ್ಕೆ ಬೆಳಿಗ್ಗೆ ಬಸ್ಸಿನಲ್ಲಿ ಬರುತ್ತಿದ್ದ ಸಂದರ್ಭ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿದ ಸದಾನಂದನ ಸಂಬಂಧಿಗಳಾದ ಇಬ್ಬರು ವ್ಯಕ್ತಿಗಳನ್ನೂ ಇದಕ್ಕೂ ಮೊದಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತನಿಕೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು ಶೀಘ್ರವಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಅವರಿಗೆ ಸಹಕರಿಸಿದ್ದರು ಎನ್ನಲಾದ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಎಸ್‌ಪಿ ವಿಷ್ಣುವರ್ಧನ್ ಅವ ಮಾರ್ಗದರ್ಶನದಲ್ಲಿ ಎಎಸ್‌ಪಿ ಸಿದ್ಧಲಿಂಗಯ್ಯ ಹಾಗೂ ಡಿವೈಎಸ್‌ಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಲ್ಲಿ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರ ನೇತೃತ್ವದಲ್ಲಿ ಬೈಂದೂರು ಪಿಎಸ್‌ಐ ಪವನ್ ನಾಯಕ್ ಗಂಗೊಳ್ಳಿ ಪಿಎಸ್‌ಐ ವಿನಯ ಕೊರ್ಲಹಳ್ಳಿ, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಾಗೇಂದ್ರ, ಮೋಹನ, ಕೃಷ್ಣ, ಶ್ರೀಧರ, ಪ್ರಿನ್ಸ್, ಚಂದ್ರ ಗಂಗೊಳ್ಳಿ, ಚಾಲಕ ಚಂದ್ರಶೇಖರ್, ಸುಜಿತ್, ಶ್ರೀನಿವಾಸ್, ಶಾಂತರಾಮ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago