ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಅಂತರದಲ್ಲಿ ನನ್ನ ಗೆಲುವಿಗೆ ಕಾರಣವಾಗಿದೆ. ಈ ಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ ಅವರು ಶುಕ್ರವಾರ ಹೆಮ್ಮಾಡಿಯ ಜುವೆಲ್ ಪಾರ್ಕ್ ನಲ್ಲಿರುವ ಜಯಶ್ರೀ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಮತ್ತು ಪರಿಷತ್ ಚುನಾವಣೆಯ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರನ್ನ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ನನ್ನ ಅಧಿಕಾರ ಅವಧಿಯಲ್ಲಿ ಕೇಂದ್ರ ಸರಕಾರದಿಂದ ಸಿಗುವ ಸವಲತ್ತುಗಳನ್ನು ಮತ್ತು ರಾಜ್ಯ ಸರ್ಕಾರದಿಂದ ಪಡೆಯಬಹುದಾದ ಅನುದಾನಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ವಿನಯೋಗಿ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಗುರುರಾಜ್ ಶೆಟ್ಟಿ ಅವರ ಜೊತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾತಿಯಾಗಿದ್ದ ಕಾಮಗಾರಿಗಳು ಕೂಡ ಈ ಸರಕಾರ ಅನುಷ್ಠಾನಕ್ಕೆ ತೆಗೆದುಕೊಳ್ಳುತ್ತಿಲ್ಲ. ಈಗಾಗಲೇ ಸರ್ಕಾರ ಬಂದು ಒಂದು ವರ್ಷ ಕಳೆದಿದೆ, ಇನ್ನಾದರೂ ಅಭಿವೃದ್ಧಿಯ ಕಡೆಗೆ ಸರ್ಕಾರ ಗಮನ ಕೊಡುವಂತಾಗಲಿ ಎಂದು ಆಗೈಸುತ್ತೇನೆ.
ಈ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕಾಣಬೇಕಾಗಿದ್ದು ಅರಣ್ಯ ಸಮಸ್ಯೆ, ಮರಳಿನ ಸಮಸ್ಯೆ ಬಡವರಿಗೆ ನಿವೇಶನ ಸಮಸ್ಯೆಗಳು ಹೀಗೆ ಹತ್ತು ಹಲವು ಸಮಸ್ಯೆಗಳಿದ್ದು ಇದರ ಪರಿಹಾರಕ್ಕೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದ್ದು ಬೆಲೆ ಏರಿಕೆ ಮೂಲಕ ಜನರಿಗೆ ಹೆಚ್ಚಿನ ಹೊರೆ ಹೊರೆಸುತ್ತಿದೆ ಇದರ ವಿರುದ್ಧ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಂದಿದ್ದು ರಾಜ್ಯದ ಎಲ್ಲೆಡೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದ್ದೇವೆ ಅದೇ ರೀತಿ ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗುತ್ತದೆ ಮತ್ತು ಆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಲಾಗುತ್ತಿದೆ ಎಂದರು.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…