ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ; ಕೇಂದ್ರದಿಂದ ರೂ.200 ಕೋಟಿ ಹಣ ಬಿಡುಗಡೆ : ಬಿ.ವೈ.ರಾಘವೇಂದ್ರ -Vshwanews24

ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ; ಕೇಂದ್ರದಿಂದ ರೂ.200 ಕೋಟಿ ಹಣ ಬಿಡುಗಡೆ : ಬಿ.ವೈ.ರಾಘವೇಂದ್ರ -Vshwanews24

ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು ಈ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ರೂ.200 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬೈಂದೂರಿನಲ್ಲಿ ಇಂದು ಪಟ್ಟಣ ಪಂಚಾಯಿತಿ, ಮೆಸ್ಕಾಂ ಸಬ್‌ಸ್ಟೇಷನ್ ಉದ್ಘಾಟನೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸದ ಅಭಿವೃದ್ಧಿ ಕಾರ್ಯಗಳಿಗೆ ಆರಂಭ ನೀಡಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಖಾಲಿ ಇರುವ ಜಾಗ ಗುರುತಿಸಿ, ನಿವೇಶನ ಇಲ್ಲದವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ.ಪಂ ಹೆಚ್ಚು ಅನುದಾನ ಬರುವ ಉದ್ದೇಶದಿಂದ ಉನ್ನತ ದರ್ಜೆ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಪ್ರವಾಸೋದ್ಯಮ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ಕ್ಷೇತ್ರಕ್ಕೆ ರೂ.1500 ಕೋಟಿಗೂ ಹೆಚ್ಚಿನ ಹಣ ದೊರೆತಿದೆ. ಕಂದಾಯ ಸಾಧನೆಯಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿರುವ ಬೈಂದೂರಿನಲ್ಲಿ ಕೈಗಾರಿಕಾ ವಲಯ, ಎಪಿಎಂಸಿ ಮಾರುಕಟ್ಟೆ ನಿರ್ಮಾಣದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು ಈ ವೇಳೆ ಕೊಡೇರಿ ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಿದರು.

ಬೈಂದೂರಿನ ತಾತ್ಕಾಲಿಕ ಅಗ್ನಿಶಾಮಕ ಠಾಣೆಯನ್ನು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ರಾಜ್ಯದಲ್ಲಿ 10 ನೂತನ ಅಗ್ನಿಶಾಮಕ ಠಾಣೆ ಮಂಜೂರು ಮಾಡಲಾಗಿದೆ, ರೂ.25 ಕೋಟಿ ಅನುದಾನ ನೀಡಲಾಗಿದೆ. ಇಲಾಖೆಯನ್ನು ಉನ್ನತ ವ್ಯವಸ್ಥೆಗೆ ಮಾರ್ಪಾಡು ಮಾಡಲಾಗುತ್ತದೆ. ಆದಷ್ಟು ಬೇಗ ಬೈಂದೂರಿನಲ್ಲಿ ಇಲಾಖೆಯ ಸ್ವಂತ ಕಟ್ಟಡದ ಕೆಲಸಕ್ಕೆ ಆರಂಭ ಒದಗಲಿದೆ ಎಂದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

9 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago