ಕುಂದಾಪುರ: ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ಬುಧವಾರ ತಡರಾತ್ರಿ 23 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿದ್ದು, ಆರೆಸ್ಸೆಸ್ ತೆಕ್ಕೆಗೆ ಬಂದಿದೆ.
ಬೈಂದೂರು ತಾಲೂಕಿನ ಬಿಜೂರಿನ ಗಂಟಿಹೊಳೆಯ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಬೈಂದೂರು ಬಿಜೆಪಿಯ ಟಿಕೆಟ್ ಘೋಷಣೆಯಾಗುವ ಮೂಲಕ ಅಧಿಕೃತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ.
ಕೆಳ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗುರುರಾಜ್ ಗಂಟಿಹೊಳೆ ಆರೆಸ್ಸೆಸ್ ಸ್ವಯಂಸೇವಕರಾಗಿದ್ದಾರೆ. ಹಲವಾರು ವರ್ಷಗಳ ಕಾಲ ತನ್ನ ಕುಟುಂಬವನ್ನೇ ತೊರೆದು ಸಂಘಕ್ಕಾಗಿ ಸೇವೆ ಸಲ್ಲಿಸಿದ ಅವರು ಸುಳ್ಯ, ಪುತ್ತೂರು ಭಾಗಗಳಲ್ಲಿ ಪ್ರಚಾರಕರಾಗಿದ್ದವರು. ಪ್ರಸ್ತುತ ಶಿಕ್ಷಣ ಸಂಸ್ಥೆಯೊಂದರ ವಿಶ್ವಸ್ಥರಾಗಿರುವ ಗುರುರಾಜ್ ಸಾಲ ಮಾಡಿ ಹಲವಾರು ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಿದ್ದಾರೆ.
ಒಟ್ಟಾರೆಯಾಗಿ ಕಳೆದ ಹಲವಾರು ದಿನಗಳಿಂದ ಕುತೂಹಲಕ್ಕೆ ಕಾರಣವಾಗಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ತೆರೆಬಿದ್ದಂತಾಗಿದೆ. ಇನ್ನೇನಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಹಣಾಹಣಿಯಷ್ಟೇ ಬಾಕಿಯಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…