ಕುಂದಾಪುರ: ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ಹೈಕಮಾಂಡ್ ಬುಧವಾರ ತಡರಾತ್ರಿ 23 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಬೈಂದೂರು ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಿದ್ದು, ಆರೆಸ್ಸೆಸ್ ತೆಕ್ಕೆಗೆ ಬಂದಿದೆ.
ಬೈಂದೂರು ತಾಲೂಕಿನ ಬಿಜೂರಿನ ಗಂಟಿಹೊಳೆಯ ಗುರುರಾಜ್ ಶೆಟ್ಟಿ ಗಂಟಿಹೊಳೆಗೆ ಬೈಂದೂರು ಬಿಜೆಪಿಯ ಟಿಕೆಟ್ ಘೋಷಣೆಯಾಗುವ ಮೂಲಕ ಅಧಿಕೃತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ.
ಕೆಳ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಗುರುರಾಜ್ ಗಂಟಿಹೊಳೆ ಆರೆಸ್ಸೆಸ್ ಸ್ವಯಂಸೇವಕರಾಗಿದ್ದಾರೆ. ಹಲವಾರು ವರ್ಷಗಳ ಕಾಲ ತನ್ನ ಕುಟುಂಬವನ್ನೇ ತೊರೆದು ಸಂಘಕ್ಕಾಗಿ ಸೇವೆ ಸಲ್ಲಿಸಿದ ಅವರು ಸುಳ್ಯ, ಪುತ್ತೂರು ಭಾಗಗಳಲ್ಲಿ ಪ್ರಚಾರಕರಾಗಿದ್ದವರು. ಪ್ರಸ್ತುತ ಶಿಕ್ಷಣ ಸಂಸ್ಥೆಯೊಂದರ ವಿಶ್ವಸ್ಥರಾಗಿರುವ ಗುರುರಾಜ್ ಸಾಲ ಮಾಡಿ ಹಲವಾರು ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ನೀಡುತ್ತಿದ್ದಾರೆ.
ಒಟ್ಟಾರೆಯಾಗಿ ಕಳೆದ ಹಲವಾರು ದಿನಗಳಿಂದ ಕುತೂಹಲಕ್ಕೆ ಕಾರಣವಾಗಿದ್ದ ಬೈಂದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ತೆರೆಬಿದ್ದಂತಾಗಿದೆ. ಇನ್ನೇನಿದ್ದರೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಹಣಾಹಣಿಯಷ್ಟೇ ಬಾಕಿಯಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…