Featured

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ – vishwanews24

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ

ಬೈಂದೂರು: ಮೂರು ಜಿಲ್ಲೆಯಲ್ಲಿನ ಸುಮಾರು 320 ಕಿ.ಮೀ ವ್ಯಾಪ್ತಿಯ ಸಮುದ್ರದಲ್ಲಿ ಲೈಟ್ ಫಿಶಿಂಗ್ ಹಾಗೂ ಬುಲ್ ಟ್ರಾಲ್ ಮೂಲಕ ಮೀನುಗಾರಿಕೆ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ಇದನ್ನು ವಿರೋಧಿಸಿ ಜ.10ರಂದು ತ್ರಾಸಿ ಬೀಚ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ನಾಗೇಶ ಖಾರ್ವಿ ಹೇಳಿದ್ದಾರೆ.

ಉಪ್ಪುಂದ ನಾಡದೋಣಿ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವೈಜ್ಞಾನಿಕ ಮೀನುಗಾರಿಕೆಯಿಂದ ಮೀನುಗಳ ಸಂತತಿ ಶೀಘ್ರ ನಾಶವಾಗುವ ಭೀತಿ ಎದುರಾಗಿದೆ. ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಿ ಸೂಕ್ತ ಕ್ರಮಕೈಗೊಂಡು ಸಾಂಪ್ರದಾಯಿಕ ನಾಡದೋಣಿ ಮೀನು ಗಾರರನ್ನು ಉಳಿಸುವ ನಿಟ್ಟಿನಲ್ಲಿ ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಲೈಟ್ ಫಿಶಿಂಗ್‌ಗೆ ಕಡಿವಾಣ ಹಾಕದೆ ಇಲಾಖೆಗಳು ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಇದರಿಂದ ನಾಡದೋಣಿ ಮೀನುಗಾರರು ಸಂಕಷ್ಟ ಅನುಭವಿಸು ವಂತೆ ಮಾಡುತ್ತಿದ್ದಾರೆ. ಈ ಮೂಲಕ ಮೀನುಗಾರರು ಮುಂದಿನ ದಿನಗಳಲ್ಲಿ ಬೀದಿಗೆ ಬೀಳುವಂತೆ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಅವರು ತಿಳಿಸಿದರು.

ಜ.10ರಂದು ನಡೆಯುವ ಪ್ರತಿಭಟನೆಯಲ್ಲಿ ಭಟ್ಕಳದಿಂದ ಗಂಗೊಳ್ಳಿಯ ವರೆಗಿನ ಸಾವಿರಕ್ಕೂ ಹೆಚ್ಚು ದೋಣಿಗಳನ್ನು ಸಮುದ್ರದಲ್ಲಿ ಲಂಗರು ಹಾಕಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ಮೂರು ಜಿಲ್ಲೆಯ ನಾಡದೋಣಿ ಮೀನುಗಾರರು ಭಾಗವಹಿಸಲಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಗದೆ ಹೋದರೆ ಜಿಲ್ಲಾಡಳಿತ ಕಚೇರಿ ಎದುರು ಧರಣಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಒಕ್ಕೂಟದ ಗೌರವ ಸಲಹೆಗಾರ ಮದನ್ ಕುಮಾರ್ ಉಪ್ಪುಂದ ಮಾತನಾಡಿ, ಬೆಳಕು ಬಳಸಿ ಮೀನುಗಾರಿಕೆಯಿಂದ ಮೀನುಗಳ ಸಂತತಿಯ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಲೈಟ್ ಫಿಶಿಂಗ್‌ಗೆ ನಿಷೇಧಿಸಿ ನ್ಯಾಯಾ ಲಯ ಆದೇಶ ನೀಡಿದೆ. ಮೀನುಗಾರಿಕೆ ಸಚಿವರು ಸದನದಲ್ಲಿ ನಿಷೇಧ ಇದೆ ಎಂದು ಹೇಳಿ ಉತ್ತರ ನೀಡಿದ್ದಾರೆ. ಆದರೆ ಹೊರಗಡೆ ವಿರುದ್ಧವಾಗಿ ಹೇಳಿಕೆ ನೀಡುವ ಮೂಲಕ ನಾಡದೋಣಿ ಮೀನುಗಾರರಿಗೆ ಅನ್ಯಾಯ ಉಂಟು ಮಾಡುತ್ತಿದ್ದಾರೆ ಇದರಿಂದ ಮೀನುಗಾರರ ಬದುಕು ಬೀದಿಗೆ ಬರುತ್ತದೆ. ಅವೈಜ್ಞಾನಿಕ ಮೀನುಗಾರಿಕೆ ನಡೆಸುವುದು ನಿಲ್ಲುವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಶವಂತ ಖಾರ್ವಿ, ರಾಜ್ಯ ಒಕ್ಕೂಟದ ಉಪಾಧ್ಯಕ್ಷ ನಾಗೇಶ ಖಾರ್ವಿ, ಸದಸ್ಯರಾದ ರಾಮ ಖಾರ್ವಿ, ಚಂದ್ರ ಖಾರ್ವಿ ಉಪಸ್ಥಿತರಿದ್ದರು.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

7 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago