ಬೈಂದೂರು: ಮೂರು ಜಿಲ್ಲೆಯಲ್ಲಿನ ಸುಮಾರು 320 ಕಿ.ಮೀ ವ್ಯಾಪ್ತಿಯ ಸಮುದ್ರದಲ್ಲಿ ಲೈಟ್ ಫಿಶಿಂಗ್ ಹಾಗೂ ಬುಲ್ ಟ್ರಾಲ್ ಮೂಲಕ ಮೀನುಗಾರಿಕೆ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ಇದನ್ನು ವಿರೋಧಿಸಿ ಜ.10ರಂದು ತ್ರಾಸಿ ಬೀಚ್ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ನಾಗೇಶ ಖಾರ್ವಿ ಹೇಳಿದ್ದಾರೆ.
ಉಪ್ಪುಂದ ನಾಡದೋಣಿ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವೈಜ್ಞಾನಿಕ ಮೀನುಗಾರಿಕೆಯಿಂದ ಮೀನುಗಳ ಸಂತತಿ ಶೀಘ್ರ ನಾಶವಾಗುವ ಭೀತಿ ಎದುರಾಗಿದೆ. ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಿ ಸೂಕ್ತ ಕ್ರಮಕೈಗೊಂಡು ಸಾಂಪ್ರದಾಯಿಕ ನಾಡದೋಣಿ ಮೀನು ಗಾರರನ್ನು ಉಳಿಸುವ ನಿಟ್ಟಿನಲ್ಲಿ ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಲೈಟ್ ಫಿಶಿಂಗ್ಗೆ ಕಡಿವಾಣ ಹಾಕದೆ ಇಲಾಖೆಗಳು ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಇದರಿಂದ ನಾಡದೋಣಿ ಮೀನುಗಾರರು ಸಂಕಷ್ಟ ಅನುಭವಿಸು ವಂತೆ ಮಾಡುತ್ತಿದ್ದಾರೆ. ಈ ಮೂಲಕ ಮೀನುಗಾರರು ಮುಂದಿನ ದಿನಗಳಲ್ಲಿ ಬೀದಿಗೆ ಬೀಳುವಂತೆ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಅವರು ತಿಳಿಸಿದರು.
ಜ.10ರಂದು ನಡೆಯುವ ಪ್ರತಿಭಟನೆಯಲ್ಲಿ ಭಟ್ಕಳದಿಂದ ಗಂಗೊಳ್ಳಿಯ ವರೆಗಿನ ಸಾವಿರಕ್ಕೂ ಹೆಚ್ಚು ದೋಣಿಗಳನ್ನು ಸಮುದ್ರದಲ್ಲಿ ಲಂಗರು ಹಾಕಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ಮೂರು ಜಿಲ್ಲೆಯ ನಾಡದೋಣಿ ಮೀನುಗಾರರು ಭಾಗವಹಿಸಲಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಗದೆ ಹೋದರೆ ಜಿಲ್ಲಾಡಳಿತ ಕಚೇರಿ ಎದುರು ಧರಣಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯ ಒಕ್ಕೂಟದ ಗೌರವ ಸಲಹೆಗಾರ ಮದನ್ ಕುಮಾರ್ ಉಪ್ಪುಂದ ಮಾತನಾಡಿ, ಬೆಳಕು ಬಳಸಿ ಮೀನುಗಾರಿಕೆಯಿಂದ ಮೀನುಗಳ ಸಂತತಿಯ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಲೈಟ್ ಫಿಶಿಂಗ್ಗೆ ನಿಷೇಧಿಸಿ ನ್ಯಾಯಾ ಲಯ ಆದೇಶ ನೀಡಿದೆ. ಮೀನುಗಾರಿಕೆ ಸಚಿವರು ಸದನದಲ್ಲಿ ನಿಷೇಧ ಇದೆ ಎಂದು ಹೇಳಿ ಉತ್ತರ ನೀಡಿದ್ದಾರೆ. ಆದರೆ ಹೊರಗಡೆ ವಿರುದ್ಧವಾಗಿ ಹೇಳಿಕೆ ನೀಡುವ ಮೂಲಕ ನಾಡದೋಣಿ ಮೀನುಗಾರರಿಗೆ ಅನ್ಯಾಯ ಉಂಟು ಮಾಡುತ್ತಿದ್ದಾರೆ ಇದರಿಂದ ಮೀನುಗಾರರ ಬದುಕು ಬೀದಿಗೆ ಬರುತ್ತದೆ. ಅವೈಜ್ಞಾನಿಕ ಮೀನುಗಾರಿಕೆ ನಡೆಸುವುದು ನಿಲ್ಲುವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಶವಂತ ಖಾರ್ವಿ, ರಾಜ್ಯ ಒಕ್ಕೂಟದ ಉಪಾಧ್ಯಕ್ಷ ನಾಗೇಶ ಖಾರ್ವಿ, ಸದಸ್ಯರಾದ ರಾಮ ಖಾರ್ವಿ, ಚಂದ್ರ ಖಾರ್ವಿ ಉಪಸ್ಥಿತರಿದ್ದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…