ಕುಂದಾಪುರ: ಯಾವುದೇ ದಾಖಲೆಗಳಿಲ್ಲದೆ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಪೊಲೀಸರು ಶಿರೂರು ಚೆಕ್ ಪೋಸ್ಟಿನಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 16ರಂದು ಬೈಂದೂರು ಪೊಲೀಸ್ ಉಪನಿರೀಕ್ಷಕರಾದ ನಿರಂಜನ ಗೌಡ ಬಿ ಎಸ್ ಅವರು ಸಿಬ್ಬಂದಿಗಳೊಂದಿಗೆ ಉಡುಪಿ ಜಿಲ್ಲೆಯ ಗಡಿಭಾಗವಾದ ಶಿರೂರು ಗ್ರಾಮದ ಶಿರೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿರುವಾಗ ಭಟ್ಕಳ ಕಡೆಯಿಂದ ಬಂದ ಹುಂಡೈ ಕಂಪೆನಿಯ ವೆನ್ಯೂ ಮಾದರಿಯ ನೊಂದಣಿ ಸಂಖೈ ಇಲ್ಲದ ಕಾರನ್ನು ನಿಲ್ಲಿಸಿ ಪರಿಶೀಲಿಸಲಾಗಿ ಕಾರಿನ ಹಿಂಬದಿಯ ಸೀಟಿನ ಕೆಳಗೆ ಪ್ಲಾಸ್ಟಿಕ್ ಚೀಲದ ಕಟ್ಟು ಇದ್ದು ಅದರಲ್ಲಿ ಹಣ ಇರುವುದು ಕಂಡು ಬಂದಿದ್ದು ಕಾರಿನ ಚಾಲಕನಲ್ಲಿ ಹಣದ ಬಗ್ಗೆ ಯಾವುದೇ ದಾಖಲೆ ಇರುವ ಬಗ್ಗೆ ವಿಚಾರಿಸಿದ್ದು, ಯಾವುದೇ ದಾಖಲೆ ಇಲ್ಲದಿರುವುದು ತಿಳಿದು ಬಂದಿದೆ.
ನಂತರ ಕಟ್ಟನ್ನು ಬಿಡಿಸಿ ಪರಿಶೀಲಿಸಿದಾಗ 100 ರೂ ಮುಖಬೆಲೆಯ 3000 ನೋಟುಗಳು, 200 ರೂ ಮುಖಬೆಲೆಯ 1000 ನೋಟುಗಳು ಹಾಗೂ 500 ರೂ ಮುಖಬೆಲೆಯ 3000 ನೋಟುಗಳು ಇದ್ದು ಒಟ್ಟು 20 ಲಕ್ಷ ಹಣ ಪತ್ತೆಯಾಗಿದ್ದು, ಹಣದ ಬಗ್ಗೆ ಯಾವುದೇ ದಾಖಲೆ ಇಲ್ಲವೆಂದು ತಿಳಿಸಿದ ಮೇರೆಗೆ ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಕಾರಿನ ಚಾಲಕ ಬೆಳ್ತಂಗಡಿ ತಾಲೂಕು ಶಿರ್ಲಾಲು ನಿವಾಸಿ ಬಶೀರ್ (42) ಎಂಬವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…