ಬೈಂದೂರು : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತುಗೊಂಡ ಪರಿಣಾಮ ಮನನೊಂದು ವ್ಯಕ್ತಿಯೊಬ್ಬರು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಶಿರೂರು ಎಂಬಲ್ಲಿ ಫೆಬ್ರವರಿ 9ರಂದು ನಡೆದಿದೆ.
ಸುರೇಶ ಪೂಜಾರಿ ಕಾಡಿನತಾರು (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಶಿರೂರಿನ ಪತ್ನಿ ಮನೆಯಲ್ಲಿ ಫೆ.9ರಂದು ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದು ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ‘ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಈ ತರಹ ಹೇಡಿ ಹಾಗೆ ಬದುಕಲು ಅಗುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ’ ಎಂದು ಮೇಸೆಜ್ನ್ನು ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಅಲೆದಾಟ ಮಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…