ಬೈಂದೂರು : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತುಗೊಂಡ ಪರಿಣಾಮ ಮನನೊಂದು ವ್ಯಕ್ತಿಯೊಬ್ಬರು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಶಿರೂರು ಎಂಬಲ್ಲಿ ಫೆಬ್ರವರಿ 9ರಂದು ನಡೆದಿದೆ.
ಸುರೇಶ ಪೂಜಾರಿ ಕಾಡಿನತಾರು (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಶಿರೂರಿನ ಪತ್ನಿ ಮನೆಯಲ್ಲಿ ಫೆ.9ರಂದು ಮಧ್ಯಾಹ್ನ ಊಟ ಮುಗಿಸಿ ಮಲಗಿದ್ದು ಸಂಜೆ ಮನೆಯಿಂದ ಹೊರಬಂದ ಅವರು, ಪತ್ನಿ ಮೊಬೈಲ್ಗೆ ‘ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ಮೇಸೆಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಈ ತರಹ ಹೇಡಿ ಹಾಗೆ ಬದುಕಲು ಅಗುದಿಲ್ಲ. ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ’ ಎಂದು ಮೇಸೆಜ್ನ್ನು ಕಳುಹಿಸಿದ್ದರು.
ತಕ್ಷಣ ಸಂಬಂಧಿಕರು ಹುಡುಕಾಟ ಆರಂಭಿಸಿದ್ದು ಟೋಲ್ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುರೇಶ ಪೂಜಾರಿ ವಿರುದ್ದ ಕಳೆದ ವರ್ಷ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಸುರೇಶ್ ನಿರ್ವಹಿಸುತ್ತಿದ್ದ ಕೋರ್ಟ್ ಪ್ರೋಸೆಸ್ ಕೆಲಸದಿಂದ ಅಮಾನತಾಗಿದ್ದು ಈವರೆಗೆ ರಿವೋಕ್ ಆಗಿರಲಿಲ್ಲ. ಈ ಬಗ್ಗೆ ನಿತ್ಯ ಅಲೆದಾಟ ಮಾಡುತ್ತಿದ್ದರು. ಕೆಲಸವಿಲ್ಲದ ಚಿಂತೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…