Featured

ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಚಾಟನೆ – vishwanews24

ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಚಾಟನೆ

ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೈಂದೂರು ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಹಾಗೂ ರೈತ ಪರ ಹೋರಾಟಗಾರ ದೀಪಕ್ ಕುಮಾರ್ ಶೆಟ್ಟಿಯವರನ್ನು ಪಕ್ಷದಿಂದ 6 ವರ್ಷದ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಈ ನಿಲುವು ಬಿಜೆಪಿ ಕಾರ್ಯಕರ್ತ ವಲಯದಲ್ಲಿ ಬಾರಿ ಸಂಚಲನ ಉಂಟು ಮಾಡಿದ್ದು ದೀಪಕ್ ಕುಮಾ‌ರ್ ಶೆಟ್ಟಿ ಅಭಿಮಾನಿಗಳಿಗೆ ಬಾರಿ ಅಸಾಮಾಧಾನ ಉಂಟಾಗಿದೆ.

ದೀಪಕ್‌ ಕುಮಾ‌ರ್ ಶೆಟ್ಟಿ ಉಚ್ಚಾಟನೆಗೆ ಪ್ರಮುಖ ಕಾರಣ ಬೈಂದೂರು ಶಾಸಕರು ಮತ್ತು ಇವರ ನಡುವಿನ ಆಂತರಿಕ ಸಮರವಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಪಕ್ಷದ ಅಧೀಕೃತ ವೇದಿಕೆಯನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಮೂಲಕ ಪಕ್ಷದ ಘನತೆ, ಶಿಸ್ತಿಗೆ ಹಾನಿಯಾಗಿರುವ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ದೀಪಕ್ ಕುಮಾರ್ ಶೆಟ್ಟಿಯವರು ಗ್ರಾಮೀಣ ಭಾಗದ ನ್ಯಾಯ ಓದಗಿಸಲು ಹೋರಾಟ ಆರಂಭಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವುದು ಶಾಸಕರಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಮಾತ್ರವಲ್ಲದೆ ಕಳೆದ ಒಂದು ವರ್ಷದಿಂದ ಶಾಸಕರು ಮತ್ತು ದೀಪಕ್ ಕುಮಾರ್ ಶೆಟ್ಟಿ ನಡುವಿನತೆರೆಮರೆಯ ಸೆಣಸಾಟ ಗುಟ್ಟಾಗಿ ಉಳಿದಿರಲಿಲ್ಲ. ಮರಳು ದಂಧೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಬಳಿ ಒಪ್ಪಂದದ ಹೊಂದಾಣಿಕೆ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.ಹೀಗಾಗಿ ರೈತ ಹೋರಾಟಕ್ಕೆ ಹಿನ್ನೆಡೆ ಮಾಡಬೇಕೆನ್ನುವ ಮೂಲ ಉದ್ದೇಶದಿಂದ ಇಷ್ಟೆಲ್ಲಾ ಪ್ರಯತ್ನ ನಡೆದಿದೆ ಎನ್ನುವುದು ದೀಪಕ್ ಕುಮಾರ್ ಶೆಟ್ಟಿ ಬೆಂಬಲಿಗರ ಅಭಿಪ್ರಾಯವಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago