ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೈಂದೂರು ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಹಾಗೂ ರೈತ ಪರ ಹೋರಾಟಗಾರ ದೀಪಕ್ ಕುಮಾರ್ ಶೆಟ್ಟಿಯವರನ್ನು ಪಕ್ಷದಿಂದ 6 ವರ್ಷದ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಈ ನಿಲುವು ಬಿಜೆಪಿ ಕಾರ್ಯಕರ್ತ ವಲಯದಲ್ಲಿ ಬಾರಿ ಸಂಚಲನ ಉಂಟು ಮಾಡಿದ್ದು ದೀಪಕ್ ಕುಮಾರ್ ಶೆಟ್ಟಿ ಅಭಿಮಾನಿಗಳಿಗೆ ಬಾರಿ ಅಸಾಮಾಧಾನ ಉಂಟಾಗಿದೆ.
ದೀಪಕ್ ಕುಮಾರ್ ಶೆಟ್ಟಿ ಉಚ್ಚಾಟನೆಗೆ ಪ್ರಮುಖ ಕಾರಣ ಬೈಂದೂರು ಶಾಸಕರು ಮತ್ತು ಇವರ ನಡುವಿನ ಆಂತರಿಕ ಸಮರವಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಪಕ್ಷದ ಅಧೀಕೃತ ವೇದಿಕೆಯನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಮೂಲಕ ಪಕ್ಷದ ಘನತೆ, ಶಿಸ್ತಿಗೆ ಹಾನಿಯಾಗಿರುವ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ದೀಪಕ್ ಕುಮಾರ್ ಶೆಟ್ಟಿಯವರು ಗ್ರಾಮೀಣ ಭಾಗದ ನ್ಯಾಯ ಓದಗಿಸಲು ಹೋರಾಟ ಆರಂಭಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವುದು ಶಾಸಕರಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಮಾತ್ರವಲ್ಲದೆ ಕಳೆದ ಒಂದು ವರ್ಷದಿಂದ ಶಾಸಕರು ಮತ್ತು ದೀಪಕ್ ಕುಮಾರ್ ಶೆಟ್ಟಿ ನಡುವಿನತೆರೆಮರೆಯ ಸೆಣಸಾಟ ಗುಟ್ಟಾಗಿ ಉಳಿದಿರಲಿಲ್ಲ. ಮರಳು ದಂಧೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಬಳಿ ಒಪ್ಪಂದದ ಹೊಂದಾಣಿಕೆ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.ಹೀಗಾಗಿ ರೈತ ಹೋರಾಟಕ್ಕೆ ಹಿನ್ನೆಡೆ ಮಾಡಬೇಕೆನ್ನುವ ಮೂಲ ಉದ್ದೇಶದಿಂದ ಇಷ್ಟೆಲ್ಲಾ ಪ್ರಯತ್ನ ನಡೆದಿದೆ ಎನ್ನುವುದು ದೀಪಕ್ ಕುಮಾರ್ ಶೆಟ್ಟಿ ಬೆಂಬಲಿಗರ ಅಭಿಪ್ರಾಯವಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…