ಕುಂದಾಪುರ: ಕರಾವಳಿಯಲ್ಲಿ ಬೈಂದೂರಿನಲ್ಲಿಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಬೈಂದೂರಿ ಉಳ್ಳೂರಿನ ಹೇರೂರಿನಲ್ಲಿ ದೇವಾಲಯದ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 22 ವರ್ಷ ಪ್ರಾಯದ ಎಂಎಸ್ಸಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಳಗ್ಗೆ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ವೇಳೆ ನಂದಿಕೇಶ್ವರದ ದೇವಸ್ಥಾನದ ಗೋಡೆ ಕುಸಿದು ಬಿದ್ದಿದ್ದು ಸ್ಥಳದಲ್ಲೇ ವಿದ್ಯಾರ್ಥಿನಿ ಧನ್ಯಾ ಕೆ. ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಚಂದ್ರಶೇಖರ ಶೆಟ್ಟಿ ಮತ್ತು ಹೇಮಾವತಿ ಶೆಟ್ಟಿ ಅವರ ಪುತ್ರಿಯಾಗಿರುವ ಧನ್ಯಾ ಮಂಗಳೂರು ವಿವಿ ಯಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರು ಅಕ್ಕಂದಿರನ್ನು ಅಗಲಿದ್ದಾರೆ.
ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…