ಬೈಂದೂರು: ”ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಗಳಿಗೆ ಅನುಗುಣವಾಗಿ ಪ್ರಸ್ತುತ ಚೀನಾದ ಬದಲಾಗಿ ಮೀನುಗಾರಿಕಾ ದೋಣಿಗಳಿಗೆ ಭಾರತದಲ್ಲಿ ತಯಾರಿಸಿದ ಎಂಜಿನ್ಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ನಾವುಂದ ಶಾಖೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಕರಾವಳಿಯಲ್ಲಿ ಒಟ್ಟು 22,500 ಯಾಂತ್ರಿಕೃತ ಮೀನುಗಾರಿಕೆ ದೋಣಿಗಳು ಕಾರ್ಯನಿರ್ವಹಿಸುತ್ತಿವೆ.ಅವುಗಳಲ್ಲಿ 7,500 ಸಾಂಪ್ರದಾಯಿಕ ದೋಣಿಗಳಾಗಿದ್ದು, ಅವುಗಳಲ್ಲಿ ಒಂಭತ್ತು ದೋಣಿಗಳಿಗೆ ಎಚ್ಪಿ ಬೋರ್ಡ್ ಎಂಜಿನ್ಗಳನ್ನು ಅಳವಡಿಸಲಾಗಿದೆ. ದೊಡ್ಡ ದೋಣಿಗಳು 350 ಎಚ್ಪಿವರೆಗೆ ವಿಭಿನ್ನ ಶ್ರೇಣಿಯ ಎಂಜಿನ್ಗಳನ್ನು ಹೊಂದಿವೆ. ಅವುಗಳ ಪೈಕಿ ಶೇ.90ರಷ್ಟು ಬೋಟ್, ಯಂತ್ರೋ ಪಕರಣ ಹಾಗೂ ಎಂಜಿನ್ಗಳನ್ನು ವಿದೇಶಿ ಹಾಗೂ ಹೆಚ್ಚಾಗಿ ಚೀನಾ ನಿರ್ಮಿತ ಉಪಕರಣಗಳನ್ನು ಬಳಸಲಾಗುತ್ತಿದೆ. ಮೀನುಗಾರರು ಸ್ಥಳೀಯ ಉತ್ಪನ್ನಗಳನ್ನು ಬಳಸಲು ಒಲವು ತೋರುತ್ತಿದ್ದಾರೆ” ಎಂದಿದ್ದಾರೆ.
“ಇವುಗಳನ್ನು ಗಮನಿಸಿ ಸ್ವದೇಶಿ ನಿರ್ಮಿತ ಯಂತ್ರೋಪಕರಣ ಹಾಗೂ ಎಂಜಿನ್ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಸ್ವದೇಶಿ ನಿರ್ಮಿತ ಯಂತ್ರೋಪಕರಣಗಳನ್ನು ಬಳಸುವ ವಿಚಾರವಾಗಿ ಕಂಪೆನಿಯವರಿಗೆ ಸೂಚನೆ ನೀಡಲಾಗಿದೆ. ಗುಣಮಟ್ಟ ಹಾಗೂ ದರ ಸೂಕ್ತವೆಂದೆನಿಸಿದರೆ ಇದಕ್ಕೆ ಒಪ್ಪಿಕೊಳ್ಳಲು ಮೀನುಗಾರರು ಸಿದ್ದರಿದ್ದಾರೆ ಎನ್ನುವ ಬಗ್ಗೆ ತಿಳಿಸಿದ್ದಾರೆ. ಮೀನುಗಾರಿಕೆ ನಡೆಸುವ ಬೋಟ್ಗಳಿಗೆ ಡೀಸೆಲ್ ಬಳಕೆಯ ಬದಲಾಗಿ ಗ್ಯಾಸ್ ಬಳಕೆಗೆ ಹೆಚ್ಚು ಒತ್ತು ನೀಡಲು ತಿಳಿಸಲಾಗಿದೆ” ಎಂದಿದ್ದಾರೆ.
http://ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ : ಎನ್. ಮಹೇಶ್ -Vishwanews24
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…