Featured

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು

ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ, ಸೋಮವಾರ ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.

ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಮೃತಪಟ್ಟ ದುರ್ದೈವಿ.

ಹಾವೇರಿಯಿಂದ ಒಟ್ಟು ಏಳು ಜನರ ತಂಡ ಮುರುಡೇಶ್ವರ ಮತ್ತು ಕನ್ಯಾಕುಮಾರಿ ಪ್ರವಾಸ ಕೈಗೊಂಡಿತ್ತು. ಮುರುಡೇಶ್ವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ, ಅವರು ವಿಶ್ರಾಂತಿ ಪಡೆಯಲು ಶಿರೂರಿನ ಸಂಕದಗುಂಡಿ ನದಿಯ ಬಳಿ ತಂಗಿದ್ದರು. ಕುಟುಂಬದ ಸದಸ್ಯರು ಮಧ್ಯಾಹ್ನದ ಅಡುಗೆ ತಯಾರಿಯಲ್ಲಿ ನಿರತರಾಗಿದ್ದಾಗ, ಇಬ್ಬರು ಮಕ್ಕಳು ಸ್ನಾನ ಮಾಡಲು ಪಕ್ಕದ ನದಿಗೆ ಇಳಿದಿದ್ದಾರೆ.

ಈ ವೇಳೆ ನೀರಿನ ಆಳದ ಅರಿವಿಲ್ಲದೆ ಆಯುಷ್ ನದಿಯ ಆಳವಾದ ಭಾಗಕ್ಕೆ ಈಜಲು ಹೋಗಿ ಮುಳುಗಿದ್ದಾನೆ. ಅವನೊಂದಿಗಿದ್ದ ಸಹೋದರ ತಕ್ಷಣವೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ನದಿ ತೀರಾ ಆಳವಾಗಿದ್ದರಿಂದ, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಜಂಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಬಾಲಕನ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ.

ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago