ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ, ಸೋಮವಾರ ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಮೃತಪಟ್ಟ ದುರ್ದೈವಿ.
ಹಾವೇರಿಯಿಂದ ಒಟ್ಟು ಏಳು ಜನರ ತಂಡ ಮುರುಡೇಶ್ವರ ಮತ್ತು ಕನ್ಯಾಕುಮಾರಿ ಪ್ರವಾಸ ಕೈಗೊಂಡಿತ್ತು. ಮುರುಡೇಶ್ವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ, ಅವರು ವಿಶ್ರಾಂತಿ ಪಡೆಯಲು ಶಿರೂರಿನ ಸಂಕದಗುಂಡಿ ನದಿಯ ಬಳಿ ತಂಗಿದ್ದರು. ಕುಟುಂಬದ ಸದಸ್ಯರು ಮಧ್ಯಾಹ್ನದ ಅಡುಗೆ ತಯಾರಿಯಲ್ಲಿ ನಿರತರಾಗಿದ್ದಾಗ, ಇಬ್ಬರು ಮಕ್ಕಳು ಸ್ನಾನ ಮಾಡಲು ಪಕ್ಕದ ನದಿಗೆ ಇಳಿದಿದ್ದಾರೆ.
ಈ ವೇಳೆ ನೀರಿನ ಆಳದ ಅರಿವಿಲ್ಲದೆ ಆಯುಷ್ ನದಿಯ ಆಳವಾದ ಭಾಗಕ್ಕೆ ಈಜಲು ಹೋಗಿ ಮುಳುಗಿದ್ದಾನೆ. ಅವನೊಂದಿಗಿದ್ದ ಸಹೋದರ ತಕ್ಷಣವೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ನದಿ ತೀರಾ ಆಳವಾಗಿದ್ದರಿಂದ, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಜಂಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಬಾಲಕನ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…