ಉಡುಪಿ : ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 195/2021 ಕಲಂ: 429 ಐಪಿಸಿ ಮತ್ತು 11(1) (ಡಿ) ಪ್ರಾಣಿಹಿಂಸೆ ನಿಷೇಧ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತು ಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಟೋಯಿಂಗ್ ಗಾಡಿಗೆ ಕಟ್ಟಿ ಎಳೆದೊಯ್ದಿದ್ದಾರೆ. ಸತ್ತ ಹಸುಗಳನ್ನು ಟೋಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, “ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ,ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ” ಎಂದು ಹೇಳಿತ್ತು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…