ಬೈಂದೂರು: ಹವಾಮಾನ ವೈಪರೀತ್ಯದ ಪರಿಣಾಮ ಅಲೆಗಳ ಏರಿಳಿತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಭಾಗಶಃ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ದುರ್ಘಟನೆ ಜಿಲ್ಲೆಯ ಶೀರೂರು ಎಂಬಲ್ಲಿ ಸಂಭವಿಸಿದೆ.
ಶೀರೂರಿನ ಮುಸ್ತಾಕ್ ಎಂಬುವರ ಬೀಬಿ ಅಮೀನ ಹೆಸರಿನ ಗಿಲ್ ನೆಟ್ ದೋಣಿಯಲ್ಲಿ ಐವರು ಮೀನುಗಾರರು ನಿನ್ನ ಮಧ್ಯಾಹ್ನ ಶೀರೂರಿನಿಂದ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಕಡಲಬ್ಬರಕ್ಕೆ ಸಿಲುಕಿ ದೋಣಿ ಎರಡು ಭಾಗವಾಗಿದೆ ಎಂದು ತಿಳಿದುಬಂದಿದೆ.
ಇದರಲ್ಲಿ ಸಿಲುಕಿಕೊಂಡಿದ್ದ ಮೀನುಗಾರರು ತಕ್ಷಣ ವೈರ್ಲೆಸ್ ಮೂಲಕ ಸಂಬಂಧಪಟ್ಟರಿಗೆ ಮಾಹಿತಿ ನೀಡಿದ್ದಾರೆ.
ಅಪಾಯದಲ್ಲಿ ಸಿಲುಕಿದ್ದ ಬೋಟಿನಲ್ಲಿದ್ದ ಶೀರೂರು ಕಳುಹಿತ್ತು ಮುಫ್ಲಾಕ್ (52), ಅಶ್ರಫ್ (37), ಶಬೀರ್ (50), ಗೌಸಿಯಾ ಮೊಹಲ್ಲಾದ ಅಬೂಬಕ್ಕರ್ (55), ಬೊಂಬ ಮೀರಾ (47) ಎಂಬುವರನ್ನು ರಕ್ಷಿಸಿ ತೀರಕ್ಕೆ ಕರೆದು ಕೊಂಡು ಬರಲಾಯಿತು ಎಂದು ತಿಳಿದುಬಂದಿದೆ.
ದುರ್ಘಟನೆಯಿಂದ ಸುಮಾರು ಹತ್ತು ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…